Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

"ನಮ್ಮಲ್ಲಿ ಡಜನ್ ಮುಖ್ಯಮಂತ್ರಿ ಅಭ್ಯರ್ಥಿಗಳಿದ್ದಾರೆ" - ಕೆ.ಎನ್ ರಾಜಣ್ಣ ಹೊಸ ಬಾಂಬ್!

Advertisement
Advertisement

ಚಂದ್ರವಳ್ಳಿ ನ್ಯೂಸ್, ಮೈಸೂರು:
ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ದಿನಕ್ಕೊಂದು ತಿರುವು ಪಡೆಯುತ್ತಿವೆ. ಈ ಮಧ್ಯೆ, ಸಚಿವ ಕೆ.ಎನ್. ರಾಜಣ್ಣ ಅವರು ಮೈಸೂರಿನಲ್ಲಿ ನೀಡಿರುವ ಹೇಳಿಕೆಯೊಂದು ಕಾಂಗ್ರೆಸ್ ಪಡಸಾಲೆಯಲ್ಲಿ ಸಂಚಲನ ಮೂಡಿಸಿದೆ. "ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿಯಾಗುವ ಅರ್ಹತೆ ಹೊಂದಿರುವ ಒಂದು ಡಜನ್ ನಾಯಕರಿದ್ದಾರೆ" ಎಂದು ಹೇಳುವ ಮೂಲಕ ಅವರು ಕುತೂಹಲ ಕೆರಳಿಸಿದ್ದಾರೆ.

ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್‌ನ ವಿಳಂಬ ಧೋರಣೆಯ ವಿರುದ್ಧ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದರು. 

ಹೈಕಮಾಂಡ್ ನಡೆಗೆ ರಾಜಣ್ಣ ಆಗ್ರಹ:
ಸಿಎಂ ಬದಲಾವಣೆ ಕುರಿತ ಗೊಂದಲಕ್ಕೆ ತೆರೆ ಎಳೆಯುವಂತೆ ವರಿಷ್ಠರನ್ನು ಒತ್ತಾಯಿಸಿದ ರಾಜಣ್ಣ, "ಸಿಎಂ ಬದಲಾಗುತ್ತಾರೆ ಎಂದು ನಾನು ಹೇಳುವುದಿಲ್ಲ, ಹಾಗೆಯೇ ಇರುತ್ತಾರೆ ಎಂದೂ ವಾದಿಸುವುದಿಲ್ಲ. ಆದರೆ, ಹೈಕಮಾಂಡ್ ಅತಿ ಶೀಘ್ರವಾಗಿ ಈ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಳ್ಳಬೇಕು. ಈ ಗೊಂದಲ ಮುಂದುವರಿದರೆ ಅದು ನೇರವಾಗಿ ಸರ್ಕಾರ ಮತ್ತು ಪಕ್ಷದ ವರ್ಚಸ್ಸಿನ ಮೇಲೆ ಪರಿಣಾಮ ಬೀರುತ್ತದೆ," ಎಂದು ಎಚ್ಚರಿಸಿದರು.
ಸಿದ್ದರಾಮಯ್ಯ ಅವರಿಗೆ ಪೂರ್ಣಾವಧಿ ಅಧಿಕಾರ ನೀಡುವ ಬಗ್ಗೆಯಾದರೂ ಹೇಳಲಿ ಅಥವಾ ಬದಲಾವಣೆಯಿದ್ದರೆ ಅದನ್ನಾದರೂ ಸ್ಪಷ್ಟಪಡಿಸಲಿ ಎಂಬುದು ಅವರ ಆಗ್ರಹವಾಗಿದೆ.

ಡಿಕೆಶಿ ಆಕಾಂಕ್ಷೆಗೆ ಡಜನ್ನಾಯಕರ ಅಡ್ಡಿ?:
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಶೀಘ್ರವೇ ಪಟ್ಟಸಿಗಲಿದೆ ಎಂಬ ಅವರ ಬೆಂಬಲಿಗರ ಮಾತಿಗೆ ಮಾರ್ಮಿಕವಾಗಿ ಪ್ರತಿಕ್ರಿಯಿಸಿದ ರಾಜಣ್ಣ, "ಜೀವನದಲ್ಲಿ ಆಸೆ ಇಟ್ಟುಕೊಳ್ಳುವುದು ಸಹಜ. ಡಿ.ಕೆ. ಶಿವಕುಮಾರ್ ಅವರು ನಮ್ಮ ಪಕ್ಷದ ಅಧ್ಯಕ್ಷರು, ಅವರಿಗೆ ಸಿಎಂ ಆಗುವ ಆಸೆ ಇರುವುದು ತಪ್ಪಲ್ಲ. ಆದರೆ ಪಕ್ಷದಲ್ಲಿ ಮಲ್ಲಿಕಾರ್ಜುನ ಖರ್ಗೆ, ಜಿ. ಪರಮೇಶ್ವರ್, ಎಂ.ಬಿ. ಪಾಟೀಲ್ ಸೇರಿದಂತೆ ಬಹಳಷ್ಟು ಜನ ಸಮರ್ಥ ನಾಯಕರಿದ್ದಾರೆ," ಎನ್ನುವ ಮೂಲಕ ಸಿಎಂ ರೇಸ್‌ನಲ್ಲಿ ಅನೇಕರಿದ್ದಾರೆ ಎಂಬ ಸುಳಿವು ನೀಡಿದರು.

ಮೈಸೂರಿನಲ್ಲಿ ನಡೆದ ಈ ಹೇಳಿಕೆಗಳು ರಾಜ್ಯ ರಾಜಕಾರಣದ ಮುಂದಿನ ದಿಕ್ಕನ್ನು ಬದಲಿಸುವ ಮುನ್ಸೂಚನೆ ನೀಡುತ್ತಿದ್ದು, ವರಿಷ್ಠರ ಮುಂದಿನ ನಡೆ ಏನು ಎಂಬುದು ಕುತೂಹಲ ಮೂಡಿಸಿದೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST