Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಏನಿದು ಮಹಿಮೆ, ಮಳೆ ಇಲ್ಲದಿದ್ದರೂ ಕೆರೆ ತುಂಬಿ ಕೋಡಿ ಹರಿದ ನೀರು

Advertisement
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಇದು ಅಸಲಿಗೆ ಮಳೆಗಾಲವಲ್ಲ, ಹೋಗಲಿ ಯಾವುದೇ ಸ್ಲೈಕೋನ್ ಎಫೆಕ್ಟ್ ನಿಂದ ಭಾರೀ ಮಳೆ ಸುರಿದಿಲ್ಲ ಆದರೂ ಕುಗ್ರಾಮದ ಕೆರೆಯೊಂದು ಸಂಪೂರ್ಣ ಭರ್ತಿಯಾಗಿ ಸಂಕ್ರಾಂತಿಯೊಂದೇ ಕೋಡಿ ಹರಿದು ಅಚ್ಚರಿ ಮೂಡಿಸಿದೆ ಈ ಕೆರೆ.


ಚಳ್ಳಕೆರೆ ತಾಲೂಕಿನ ಕ್ಯಾದಿಗುಂಟೆ ಗ್ರಾಮದ ಕೆರೆ ಮಳೆ ಇಲ್ಲದಿದ್ದರೂ ಕೂಡ ಸಂಕ್ರಾಂತಿ ಹಬ್ಬದ ದಿನದಂದು ಕೊಡಿ ಬಿದ್ದಿರುವುದು ರೈತ ಬಾಂಧವರಲ್ಲಿ ಸಂತಸ ಮೂಡಿಸಿದೆ ಎಂದು ತಾಲೂಕ್ ರೈತ ಸಂಘದ ಅಧ್ಯಕ್ಷ ಹಾಗೂ ಕಿಸಾನ್ ಘಟಕದ ಜಿಲ್ಲಾಧ್ಯಕ್ಷ ಎ.ನಾಗರಾಜ ಪರಶುರಾಂಪುರ ಹರ್ಷ ವ್ಯಕ್ತಪಡಿಸಿದರು.  ವಿಜಯನಗರ ಜಿಲ್ಲೆಯ ಹೊಸಪೇಟೆ ಬಳಿ ತುಂಗಭದ್ರಾ ಹಿನ್ನೀರಿಂದ ಕುಡಿಯುವ ಯೋಜನೆಯನ್ನು ಅನುಷ್ಠಾನ ಮಾಡಲಾಗುತ್ತಿದ್ದು ಈ ಯೋಜನೆ ಅಡಿಯಲ್ಲಿ  ಸುಮಾರು 6 ತಾಲ್ಲೂಕಿಗಳಿಗೆ ಕುಡಿಯುವ ನೀರನ್ನು ಒದಗಿಸುವ ಕಾಮಗಾರಿ ಪ್ರಗತಿಯಲ್ಲಿದೆ.

ಚಳ್ಳಕೆರೆ ತಾಲೂಕು ಕ್ಯಾದಿಗುಂಟೆ ಹತ್ತಿರ ಪಾವಗಡ ತಾಲೂಕಿಗೆ ಪಂಪಿಂಗ್ ಮಾಡುವ ಸಬ್ ಸ್ಟೇಷನ್ ಇದ್ದು ಕಾಮಗಾರಿಯಲ್ಲಿ ಟ್ರಯಲ್ ನಡೆಯುತ್ತಿದ್ದು ಟ್ರಯಲ್ ರನ್  ನೀರನ್ನು ಕ್ಯಾದಿಗುಂಟೆ ಕೆರೆಗೆ ಹರಿಯುತ್ತಿದ್ದ ಕಾರಣ ಗ್ರಾಮದ ಕೆರೆ ಕೋಡಿ ಬಿದ್ದಿರುವುದು ವರದಾನವೇ ಸರಿ. ಕೆರೆ ತುಂಬಿರುವುದರಿಂದ ಸುತ್ತಮುತ್ತಲಿನ ಕೊಳವೆ ಬಾವಿಗಳಲ್ಲಿ ಅಂತರ್ಜಲ ಮಟ್ಟ ಹೆಚ್ಚಿದ್ದು ಈ ಭಾಗದ ರೈತರಿಗೆ ಬಿಸಿಲಿನ ಬೇಗೆಯಲ್ಲೂ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿರುವುದು ಮತ್ತೊಷ್ಟು ಹರ್ಷದಾಯಕವಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ಎಲ್ಲದಕ್ಕೂ ಕಾರಣರಾದ ಚಳ್ಳಕೆರೆ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಮಾಜಿ ಸಚಿವ ಹೆಚ್.ಆಂಜನೇಯ, ವಿಶೇಷವಾಗಿ ಉಸ್ತಾವರಿ ಸಚಿವ ಡಿ ಸುಧಾಕರ್ ಅವರಿಗೆ ಅಖಂಡ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ಹಾಗೂ ಕಾಂಗ್ರೆಸ್ ಕಿಸಾನ್ ಘಟಕದ ಜಿಲ್ಲಾಧ್ಯಕ್ಷ ಎ. ನಾಗರಾಜು ಪರಶುರಾಂಪುರ ಇವರು ಅಭಿನಂದನೆಗಳನ್ನು ತಿಳಿಸಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ