Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜ್ವಲಂತ ಸಮಸ್ಯೆಗಳ ಬಗ್ಗೆ RSS ಏಕೆ ಮಾತನಾಡುತ್ತಿಲ್ಲ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಧರ್ಮ, ಜಾತಿ, ದೇವರ ಹೆಸರಿನಲ್ಲಿ ಯುವ ಜನಾಂಗವನ್ನು ದಿಕ್ಕು ತಪ್ಪಿಸುತ್ತಿರುವ ಆರ್ ಎಸ್ಎಸ್ ನವರು ಜ್ವಲಂತ ಸಮಸ್ಯೆಗಳ ಬಗ್ಗೆ ಏಕೆ ಮಾತನಾಡುತ್ತಿಲ್ಲ ಎಂದು ಸರ್ವೊದಯ ಕರ್ನಾಟಕ ಪಕ್ಷದ ರಾಜ್ಯ ಸಮಿತಿ ಉಪಾಧ್ಯಕ್ಷ ಜೆ.ಯಾದವರೆಡ್ಡಿ ಖಾರವಾಗಿ ಪ್ರಶ್ನಿಸಿದರು?

ಪ್ರವಾಸಿ ಮಂದಿರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪಂಚಾಯತ್‌ರಾಜ್ ಮತ್ತು ಗ್ರಾಮೀಣಾಭಿವೃದ್ದಿ ಸಚಿವ ಪ್ರಿಯಾಂಕ ಖರ್ಗೆರವರು ಪ್ರಶ್ನೆ ಮಾಡಿರುವುದಕ್ಕೆ ಅಸಭ್ಯವಾಗಿ ವರ್ತಿಸಿರುವ ಆರ್.ಎಸ್.ಎಸ್.ನವರು ಮುಖವಾಡ ಕಳಚಿದ್ದಾರೆ.

ರಾಷ್ಟ್ರಭಕ್ತಿ, ಸಂಸ್ಕಾರ ಕಲಿಸುತ್ತಾರೆಂಬ ನಂಬಿಕೆಯಿಂದ ಪೋಷಕರುಗಳು ತಮ್ಮ ಮಕ್ಕಳನ್ನು ಆರ್.ಎಸ್.ಎಸ್.ಗೆ ಕಳಿಸುವುದು ಸಹಜ. ಭಾರತದ ಚರಿತ್ರೆಯಲ್ಲಿ ಆರ್.ಎಸ್.ಎಸ್.ಗೆ ಯಾವುದೇ ಗುರುತಿಲ್ಲ. ಎಂಬತ್ತು ಲಕ್ಷದಷ್ಟು ಸದಸ್ಯರುಗಳಿರುವಂತ ದೊಡ್ಡ ಸಂಘಟನೆ. ಸಂವಿಧಾನದ ಎಲ್ಲಾ ಆಶಯಗಳನ್ನು ಗಾಳಿಗೆ ತೂರಿ ವರ್ತಿಸುತ್ತಿದ್ದಾರೆಂಬ ಕಿಡಿ ಕಾರಿದರು.

ಬೇನಾಮಿ, ಭೂಗತವಾಗಿರುವ ಆರ್.ಎಸ್.ಎಸ್.ಗೆ ಎಲ್ಲಿಂದ ಹಣ ಬರುತ್ತದೆಂಬುದು ನಿಗೂಢವಾಗಿದೆ. ಸಂವಿಧಾನ ವಿರೋಧಿ ಕೃತ್ಯದಲ್ಲಿ ತೊಡಗಿರುವ ಈ ಸಂಘಟನೆ ಪಾರದರ್ಶಕವಾಗಿದ್ದರೆ ಏಕೆ ಲೆಕ್ಕ ಕೊಡುತ್ತಿಲ್ಲ. ೧೯೨೫ ರಿಂದ ಇಲ್ಲಿಯವರೆಗೂ ಆರ್.ಎಸ್.ಎಸ್.ನಲ್ಲಿ ಉನ್ನತ ಸ್ಥಾನ ಪಡೆದವರೆಲ್ಲಾ ಬ್ರಾಹ್ಮಣರೆ. ರಾಜೇಂದ್ರಸಿಂಗ್ ಒಬ್ಬರು ಮಾತ್ರ ಅನ್ಯ ಜಾತಿಯವರು.

ಕರಾವಳಿ ಭಾಗದಲ್ಲಿ ಆರ್.ಎಸ್.ಎಸ್. ಸದಾ ಕೋಮುಗಲಭೆಯನ್ನು ಹುಟ್ಟುಹಾಕುತ್ತಿರುತ್ತದೆ. ಇಂತಹ ಸಂಘಟನೆಯನ್ನು ನಿಷೇಧಿಸಬೇಕೆಂದು ಪ್ರಿಯಾಂಕಖರ್ಗೆ ಹೇಳಿರುವುದರಲ್ಲಿ ಯಾವ ತಪ್ಪು ಇಲ್ಲ ಎಂದು ಸಮರ್ಥಿಸಿಕೊಂಡರು.

ಜಾತಿವಾದಿಯಿಂದ ತುಂಬಿಕೊಂಡಿರುವ ಆರ್.ಎಸ್.ಎಸ್.ಗೆ ಬಿಜೆಪಿ. ಹೈಕಮಾಂಡ್. ಮಹಾತ್ಮಗಾಂಧಿಯನ್ನು ಕೊಂದ ಗೋಡ್ಸೆಯನ್ನು ವೈಭವೀಕರಿಸುವ ಇವರು ಕಲ್ಬುರ್ಗಿ, ಗೌರಿ ಲಂಕೇಶ್ ಇವರುಗಳನ್ನು ಕೊಂದಾಗಲೆಲ್ಲಾ ಸಂಭ್ರಮಿಸಿದ್ದಾರೆಂದರೆ ಎಂತಹ ವಿಕೃತ ಮನಸ್ಸಿನವರೆನ್ನುವುದು ಯಾರಿಗಾದರೂ ಗೊತ್ತಾಗುತ್ತದೆ.

ಮಹಿಳೆಯರು, ರೈತರು, ಕಾರ್ಮಿಕರ ಸಮಸ್ಯೆಗಳ ಬಗ್ಗೆ ಏಕೆ ಈ ಸಂಘಟನೆ ಮಾತನಾಡುವುದಿಲ್ಲ. ಲಾಠಿ ಕೈಯಲ್ಲಿ ಹಿಡಿದು ಪಥಸಂಚಲನೆ ನಡೆಸುವುದು ಹಿಂಸೆಯ ಪೂರಕ. ಅನ್ಯ ಧರ್ಮವನ್ನು ಕಂಡು ವಿಷ ಕಾರುವುದು ಇವರ ಕೆಟ್ಟ ಗುಣ. ಹಾಗಾಗಿ ಆರ್.ಎಸ್.ಎಸ್.ನ್ನು ನಿಷೇಧಿಸುವುದು ಸೂಕ್ತ ಎಂದರು.

ನ್ಯಾಯವಾದಿ ಸಿ.ಶಿವುಯಾದವ್ ಮಾತನಾಡಿ ಯಾವುದೇ ನೊಂದಣಿಯಿಲ್ಲದೆ ದೇಶಭಕ್ತರೆಂದು ಹೇಳಿಕೊಂಡು ಸುತ್ತುವ ಆರ್.ಎಸ್.ಎಸ್ ಸಂಘಟನೆಯನ್ನು ಮುಖ್ಯಮಂತ್ರಿ ನಿಷೇಧಿಸಬೇಕು. ಜಾತಿ, ಧರ್ಮಗಳ ವಿರುದ್ದ ಸಂಘರ್ಷ ಉಂಟು ಮಾಡುವುದೇ ಇವರ ಅಜೆಂಡ. ಹಾಗಾಗಿ ಇಂತಹ ದೇಶ ವಿರೋಧಿ ಸಂಘಟನೆಗೆ ಮೊದಲು ಕಡಿವಾಣ ಹಾಕಬೇಕೆಂದು ಒತ್ತಾಯಿಸಿದರು.

ನ್ಯಾಯವಾದಿಗಳಾದ ಬೀಸ್ನಳ್ಳಿ ಜಯಣ್ಣ, ಸುದರ್ಶನ್, ನಿವೃತ್ತ ಪ್ರಾಚಾರ್ಯ ಶಿವಕುಮಾರ್, ಅಲೆಮಾರಿ ಮತ್ತು ಅರೆಅಲೆಮಾರಿ ಜನಾಂಗದ ಜಿಲ್ಲಾಧ್ಯಕ್ಷ ಎಸ್.ಲಕ್ಷ್ಮಿಕಾಂತ್ ಇನ್ನು ಅನೇಕರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ