LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗಾಳಿ ಪಟ ಕಲೆಗೆ ಉತ್ತೇಜನ ಅಗತ್ಯ-ಹೆಚ್. ಎಸ್. ಶಿವಶಂಕರ್

Advertisement
Advertisement

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ನಮ್ಮ ನಾಡಿನ  ಸಂಸ್ಕೃತಿ ನಮ್ಮ ಕ್ರೀಡಾ ಸಮಿತಿ ವತಿಯಿಂದ
10ನೇ ವಾರ್ಷಿಕೋತ್ಸವದ ಅಂಗವಾಗಿ ನಗರದ ಭುವನೇಶ್ವರಿ ನಗರದ ಎನ್.ಮುನಿನಂಜಪ್ಪ ಅವರ ಜಮೀನಿನಲ್ಲಿ ನಡೆದ ಗಾಳಿಪಟ ಸ್ಪರ್ಧೆಯಲ್ಲಿ ಪುರುಷರು, ಮಕ್ಕಳು, ತಂಡಗಳು ಭಾಗವಹಿಸಿ, ಹಾರಿಬಿಟ್ಟಿದ್ದ ವಿವಿಧ ನಮೂನೆಯ ಚಿತ್ತಾಕರ್ಷಕ ಪಟಗಳು ಬಾನಂಗಳದಲ್ಲಿ ಹಾರಾಡಿ ಗಮನ ಸೆಳೆದವು.

ಮಕ್ಕಳೊಂದಿಗೆ ಆಗಮಿಸಿದ್ದ ಪೋಷಕರು ಗಾಳಿಪಟಗಳನ್ನು ವೀಕ್ಷಿಸುವುದರೊಂದಿಗೆ ತಾವು ತಂದಿದ್ದ ಸಣ್ಣ ಪಟಗಳನ್ನು ಹಾರಿಸಿ ಖುಷಿ ಪಟ್ಟರು.

ಗಾಳಿಪಟ ಕಲೆಗೆ ಉತ್ತೇಜನ ಅಗತ್ಯ :
ಗಾಳಿಪಟ ಹಾರಿಸುವ ಮೂಲಕ ಸ್ಪರ್ಧೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ನಗರಸಭಾ ಸದಸ್ಯ ಎಚ್.ಎಸ್.ಶಿವಶಂಕರ್
,  ದೊಡ್ಡಬಳ್ಳಾಪುರ ಗಾಳಿಪಟ ಕಲೆಗೆ ಹೆಸರಾಗಿದೆ. ಗಾಳಿಪಟ ಸ್ಪರ್ಧೆ ಹಾಗೂ ಉತ್ಸವಗಳ ಆಯೋಜನೆಯಿಂದ ಗಾಳಿಪಟ ಕಲೆಗೆ ಉತ್ತೇಜನ ದೊರೆಯುತ್ತದೆ.  ಇಲ್ಲಿನ ಗಾಳಿಪಟ ಕಲಾವಿದರು, ರಾಷ್ಟ್ರೀಯ, ಅಂತರಾಷ್ಟ್ರೀಯ ಗಾಳಿಪಟ ಉತ್ಸವಗಳಲ್ಲಿ ಭಾಗವಹಿಸಿ, ಊರಿಗೆ ಕೀರ್ತಿ ತಂದಿದ್ದಾರೆ. ಗಾಳಿಪಟ ಹಾರಿಸುವ ಕಲೆಯನ್ನು ಉಳಿಸಿ, ಬೆಳೆಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಆಸಕ್ತಿ ವಹಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ  ನಗರಸಭೆ ನಾಮಿನಿ ಸದಸ್ಯ ಎಚ್.ವಿ.ಅಖಿಲೇಶ್, ಜಿಲ್ಲಾ ಕಾಂಗ್ರೆಸ್ ಜಿಲ್ಲಾ ಯುವ ಘಟಕದ ಅಧ್ಯಕ್ಷ ಶರತ್ ಪಟೇಲ್ ,ನಮ್ಮ ಸಂಸ್ಕೃತಿ ನಮ್ಮ ಕ್ರೀಡಾ ಸಮಿತಿ ಅಧ್ಯಕ್ಷ ಎಂ.ಎಸ್.ರಾಮದಾಸ್, ಕಾರ್ಯದರ್ಶಿ ಶಿವಶಂಕರ್, ತಾಲೂಕು ಕಸಾಪ ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ, ದೇವಾಂಗ ಮಂಡಲಿ ನಿರ್ದೇಶಕ ಎನ್.ಜಿ.ಕುಮಾರ್ ಮುಖಂಡರಾದ ಚೌಡಪ್ಪ, ಮೊದಲಾದವರು ಭಾಗವಹಿಸಿದ್ದರು.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕುಟುಂಬ ಕಲಹ ಪ್ರಕರಣ ಅಧ್ಯಯನ: ಪುರುಷರಿಗೂ ಕಾನೂನು ರಕ್ಷಣೆ ಅಗತ್ಯ:ಆನಂದ್ ಸಿ ತಿರುಮಲಆನಂದ್ ಸಿ. ತಿರುಮಲಗೆ ಪ್ರತಿಷ್ಠಿತ 'ಸಾಧಕ ರತ್ನ ಪ್ರಶಸ್ತಿ' ಪ್ರದಾನಮಹಾಭಾರತದ ಭೀಷ್ಮನ ವ್ಯಕ್ತಿತ್ವ ಅತ್ಯಂತ ಕುತೂಹಲಕಾರಿ-ಡಾ. ತಾರಿಣಿ ಶುಭದಾಯಿನಿಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಮಸ್ಯೆಗಳ ಕುರಿತು ಪ್ರಸನ್ನಾನಂದ ಸ್ವಾಮೀಜಿಗೆ ಮನವಿ ಸಲ್ಲಿಕೆಕೃತಕ ಬುದ್ಧಿಮತ್ತೆ ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನಕೋಟೆ ಮುಂಭಾಗ ಮತ್ತೊಂದು ಟಿಕೆಟ್ ಕೌಂಟರ್ ತೆರೆಯುವ ಬೇಡಚಿತ್ರದುರ್ಗ ಜಿಲ್ಲೆಯಲ್ಲಿ ಕಾಂಗ್ರೆಸ್ ಅನೇಕ ರಾಜಕೀಯ ಸವಾಲುಗಳನ್ನು ಎದುರಿಸುತ್ತಿದೆವಿಜೃಂಭಣೆಯಿಂದ ನಡೆದ ಸಂಭ್ರಮದ ಭೂತ ನೆರಿಗೆಗಾಳಿ ಪಟ ಕಲೆಗೆ ಉತ್ತೇಜನ ಅಗತ್ಯ-ಹೆಚ್. ಎಸ್. ಶಿವಶಂಕರ್ಆನೇಕಲ್ ಬಳಿ ಭೀಕರ ಅಗ್ನಿ ಅವಘಡ: ಧಗಧಗನೆ ಉರಿದು ಭಸ್ಮವಾದ 4 ಖಾಸಗಿ ಬಸ್‌ಗಳು!