Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಮಾಜಕ್ಕೆ ಸೇವೆ ಸಲ್ಲಿಸುವ ಗುಣ ಬೆಳೆಸಿಕೊಂಡಿರುವ ಮಹಿಳೆಯರು

Advertisement
ಚಂದ್ರವಳ್ಳಿ ನ್ಯೂಸ್, ಚಾಮರಾಜನಗರ:
ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನ ಹಾಗೂ ಸಾಹಿತ್ಯಕ್ಕೆ ಮಹಿಳೆಯರ ಕೊಡುಗೆಗಳು ಕುರಿತು ಸಭಾಂಗಣದಲ್ಲಿ ಸಂವಾದ ಜರುಗಿತು.


ಶಿಕ್ಷಕಿ ಚಂದನ ಉದ್ಘಾಟಿಸಿ ಮಾತನಾಡಿ ಮಹಿಳೆಯರೇ ಹೆಚ್ಚು ಕೊಡುಗೆ ನೀಡುತ್ತಿದ್ದಾರೆ ಯಾರಿಗೂ ಕಡಿಮೆಇಲ್ಲದಂತೆ ದುಡಿಯುತ್ತಿದ್ದಾರೆ. ಮಹಿಳೆಯರು ಇಂದು ಎಲ್ಲಾ ಕ್ಷೇತ್ರಗಳಲ್ಲೂ ಮುನ್ನಡೆಯನ್ನು ಸಾಧಿಸಿ ಅಭಿವೃದ್ಧಿಯತ್ತ ಸಾಗುತ್ತಿದ್ದಾರೆ. ಮಹಿಳೆಯರು ಸಮಾಜಕ್ಕೆ ತಮ್ಮ ಸೇವೆಯ ಮೂಲಕ ಅರ್ಪಿಸುವ ಗುಣವನ್ನು ಬೆಳೆಸಿಕೊಂಡಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕಾರ್ಯಕ್ರಮ ಉದ್ಘಾಟಿಸುವ ಸೌಭಾಗ್ಯ ದೊರೆತಿದೆ . ಎಲ್ಲಾ ಮಹಿಳೆಯರಿಗೂ ಶುಭಾಶಯಗಳು. ಮಹಿಳೆಯರ ಬರವಣಿಗೆಗಳು, ಲೇಖನಗಳು, ಕಾಂಡಬರಿಗಳು ಸಂಶೋಧನೆಗಳ ಸಾಹಿತ್ಯ ತುಂಬಾ ಪ್ರಭಾವಶಾಲಿಯಾಗಿ ಇರುತ್ತದೆ ಎಂದರು.

ನಿವೃತ್ತ ಶಿಕ್ಷಕಿ, ಕನ್ನಡ ಸಾಹಿತ್ಯ ಪರಿಷತ್ತಿನ ನಿರ್ದೇಶಕಿ ಸರಸ್ವತಿ ಮಾತನಾಡಿ ಅತ್ಯಂತ ಪ್ರಭಾವಶಾಲಿಯಾದ ಶಿಕ್ಷಣ ಕ್ಷೇತ್ರದಲ್ಲಿ ಮಹಿಳೆಯರು ಅಗಾಧ ಪರಿಶ್ರಮದ ಮೂಲಕ ಅಭಿವೃದ್ಧಿ ಸಾಧಿಸಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲೂ ಇವರ ಕೊಡಿಗೆ ವರ್ಣಿಸಲು ಅಸಾಧ್ಯ. ಇಂದು ಮಾಧ್ಯಮ ಕ್ಷೇತ್ರಗಳಲ್ಲೂ ಮಹಿಳೆಯರನ್ನು ಹೆಚ್ಚು ಕಾಣಬಹುದು ಎಂದರು.

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಗೂ ಚಿಂತಕ ಸುರೇಶ್ ಎನ್ ಋಗ್ವೇದಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ ಭಾರತೀಯ ಮತ್ತು ಸಮಗ್ರ ದೇಶಿಯ ಸಾಹಿತ್ಯಕ್ಕೆ ಸಾವಿರಾರು ಮಹಿಳೆಯರು ತಮ್ಮ ಸಾಹಿತ್ಯದ ಮೂಲಕ ದೇಶದ ಬೆಳವಣಿಗೆಗೆ ಸಮಾಜದ ಅರಿವಿಗೆ ಕಾರಣರಾಗಿದ್ದಾರೆ . ಮಹಿಳೆ  ಎಲ್ಲಾ ಕ್ಷೇತ್ರಗಳನ್ನು ಅಭಿವೃದ್ಧಿಯ ಪಥದಲ್ಲಿ ಸಾಗುಸುತ್ತಿದ್ದಾರೆ. ಮಹಿಳೆಯರಿಲ್ಲದ ಕ್ಷೇತ್ರವೇ ಇಲ್ಲ.

ಕನ್ನಡ ಸಾಹಿತ್ಯಕ್ಕೆ ಅನೇಕ ಕವಿಗಳು ಸಾಹಿತಿಗಳು, ವಿಮರ್ಶಕರು, ಚಿಂತಕರು, ಲೇಖಕರು ತಮ್ಮದೇ ಆದ ಸಾಹಿತ್ಯ ನೀಡುವ ಮೂಲಕ ಕನ್ನಡ ಸಾಹಿತ್ಯವನ್ನು ಕಾಲಕಾಲಕ್ಕೆ ಅಭಿವೃದ್ಧಿಪಡಿಸುತ್ತಾ ಪ್ರತಿ ಮನೆಗಳಲ್ಲೂ ಕನ್ನಡದ ವಾತಾವರಣವನ್ನು ಸೃಷ್ಟಿಸುವ ಮೂಲಕ ಸಾಹಿತ್ಯಕ್ಕೆ ತಮ್ಮದೇ ಆದ ನಿರಂತರ ಕೊಡುಗೆಯನ್ನು ನೀಡಿದ್ದಾರೆ. ಅಕ್ಕಮಹಾದೇವಿ ,ವೈದೇಹಿ ,ಶೃಂಗಾರಮ್ಮ ಗಿರಿಯಮ್ಮ, ನಂಜನಗೂಡು ತಿರುಮಲಂಬ ,ಬೆಳಗೆರೆ ಜಾನಕಮ್ಮ, ತ್ರಿವೇಣಿ, ಇಂದಿರಾ, ನಿರಂಜನ, ಭಾನುಮುಸ್ತಾಕ ಮುಂತಾದ ನೂರಾರು ಲೇಖಕರು ಕನ್ನಡ ಸಾಹಿತ್ಯಕ್ಕೆ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ ಎಂದರು.

ಮಹಿಳೆಯರ ಸಾಧನೆಯ ಕುರಿತು ಗಾಯಕರಾದ ಶಿವಲಿಂಗ ಮೂರ್ತಿ, ರವಿಚಂದ್ರ ಪ್ರಸಾದ್ ರವರು ಗೀತೆಗಳು ಹಾಡಿದರು.

ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಬಿಕೆ ಆರಾಧ್ಯ, ಮಹಿಳಾ ಸಂಘಟನೆಗಳ ಭಾರತಿ, ಸ್ಫೂರ್ತಿ, ಸಿಂಚನ, ಅನ್ನಪೂರ್ಣ, ಮಹೇಶ್ವರಿ, ಪೂರ್ಣಿಮಾ, ಮಹದೇವಮ್ಮ, ಅನಿತಾ, ರಾಘವೇಣಿ ಇದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ