Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಿಳಾ ದಿನಾಚರಣೆ: ವರ್ಷಕ್ಕೊಮ್ಮೆ ಅವಳ ದಿವಸ ಮಾತ್ರವೇ?

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅಂದಾಕ್ಷಣ ನೆನಪು ಬರೋದು ನಮ್ಮ ಮನೆಗಳಲ್ಲಿ ಏನೂ ಅಪೇಕ್ಷೆ ಮಾಡದೆ ಕೆಲಸ ಮಾಡುವ ಅಮ್ಮಂದಿರು. ಎಲ್ಲರೂ ರಜೆ ಇರಬೇಕು
, ಬಿಡುವಿರಬೇಕು, ಸಂಬಳ ಬರಬೇಕು ಎಂದು ಮನಸ್ಸಿನಲ್ಲಿ ಚಿಂತನೆ ಮಾಡುವ ಸಾಮಾಜಿಕ ನ್ಯಾಯ ನಮ್ಮ ಮನೆಯಲ್ಲೆ ಠುಸ್ಸೆಂದು ಕೈ ಕೊಡುತ್ತದೆ. ಅವಳಿಗೆ ಕೊಂಚ ಬಿಡುವು ಕೊಡುವ ಯೋಚನೆಯನ್ನೂ ಸಹ ನಾವು ಮಾಡುವುದಿಲ್ಲ. ಪ್ರಾಯಶಃ ಇದನ್ನು ಅವಳೇ ಎಸಗಿಕೊಂಡ ಸ್ವಯಂಕೃತ ಅಪರಾಧ ಎಂದೂ ನಾವು ತಿಳಿದುಕೊಳ್ಳುತ್ತೇವೆ.

ಏನನ್ನೂ ಹೇಳದೆ ಎಲ್ಲಾ ಕೆಲಸವನ್ನು ತನ್ನ ಮೈಮೇಲೆ ಎಳೆದುಕೊಳ್ಳುವ ಮಾತೆಯರಿಗೆ ತಮ್ಮನ್ನು ಬದಲಾವಣೆ ಮಾಡಿಕೊಳ್ಳುವ ಮನಸ್ಸು ಮಾತ್ರ ಬರುವುದಿಲ್ಲ. ಮಗ ಯಾವತ್ತೂ ಆ ಕೆಲಸ ಮಾಡಿಲ್ಲ... ಈಗಲೂ ಮಾಡಲ್ಲ.. ಈ ರೀತಿಯ ಭಾವನೆಯನ್ನು ಅಮ್ಮಂದಿರು ಹೊರಹಾಕದಿದ್ದರೆ ಮನೆಯಲ್ಲಿ ಬದಲಾವಣೆ ಬರೋದು ತುಂಬಾ ಕಷ್ಟ.

ಬದಲಾವಣೆ ತರಬೇಕು :-
ಸಮಾಜದಲ್ಲಿ ಬದಲಾವಣೆ ತರುವ ಪ್ರಯತ್ನ ಮಾಡಬೇಕು. ಅದು ಬಿಟ್ಟು ಇವತ್ತು ತನ್ನ ಮಗಳಿಗೆ ಕೆಲಸ ಮಾಡಲು ಕಲಿಸುವ ಹೆಣ್ಣುಮಕ್ಕಳೇ ಜಾಸ್ತಿ ಆಗಿದ್ದಾರೆ. ಪುರುಷ ಪ್ರಧಾನ ಸಮಾಜದಲ್ಲಿ ಹೆಣ್ಣು ಮಕ್ಕಳನ್ನು ಎರಡನೇ ದರ್ಜೆ ನಾಗರೀಕರನ್ನಾಗಿ ನೋಡುವ ಪರಿ ಬದಲಿಸುವ ಪ್ರಯತ್ನ ಮಾಡಬೇಕಾಗಿದೆ..

ಗಂಡು ಮತ್ತು ಹೆಣ್ಣು ಭೇದವಿಲ್ಲದೆ ಅಡಿಗೆಮನೆ ಸೇವಿದಂತೆ ಮನೆಯ ಕಾರ್ಯ ಚಟುವಟಿಕೆಯನ್ನು ಇಬ್ಬರು ಸೇರಿ ಮಾಡಿದರೆ ಜೀವನ ರಥ ಉತ್ತಮವಾಗಿ ಸಾಗಬಲ್ಲದು.

ಇಂದಿನ ಸಮಾಜದಲ್ಲಿ ಜನರು:
ಬಹಳ ಓದಿರ್ತಾರೆ. ಸಂಬಳ ಬರುತ್ತದೆ. ಲೋಕ ಜ್ಞಾನವೂ ಇರುತ್ತದೆ. ಆದರೂ ಸಹ ಮಾತಿಗೂ ವಿದ್ಯೆಗೆ ಸಂಬಂಧವೇ ಇರುವುದಿಲ್ಲ ಎನ್ನುವಂತೆ ವರ್ತಿಸುತ್ತಾರೆ. ನೀವು ಯಾವುದೇ ಮನೆಯನ್ನು ನೋಡಿ, ಗಂಡ ಹೆಂಡತಿ ಇಬ್ಬರೂ ಕೆಲಸಕ್ಕೆ ಹೋದರೆ, ಸಮಯ ಸಂದರ್ಭ ಏನೇ ಇದ್ದರೂ ಅಡುಗೆ ಕೆಲಸ ಹೆಣ್ಣುಮಕ್ಕಳದೇ; ಇಷ್ಟ ಇದೆಯೋ ಇಲ್ಲವೋ ಅವರದನ್ನು ಮಾಡಲೇಬೇಕು.

ಮನೆಯಲ್ಲಿ ಕಸ ಗುಡಿಸೋಕೆ ಹೆಣ್ಣಿಗೆ ಮಾತ್ರ ಹೇಳಿಕೊಟ್ಟು, ಗಂಡು ಮಕ್ಕಳಿಗೆ ಅದರ ಅವಶ್ಯಕತೆ ಇಲ್ಲ ಎನ್ನುವ ಮನೋಭಾವ ಬದಲಾವಣೆಯಾಗಬೇಕು.

ದೇವತೆ ಎಂದು ಪೂಜಿಸುವ ಹೆಣ್ಣುಮಕ್ಕಳನ್ನು ಈಗಲೂ ಅಳೆಯುವುದು ಅವಳ ಬುದ್ಧಿಮತ್ತೆಯಿಂದ, ಅವಳ ಕಲೆಯಿಂದ, ಅವಳ ಸೌಂದರ್ಯದಿಂದ; ಅಲ್ಲದೇ ಅವಳ ಅಡಿಗೆ ಕಲೆ, ಮನೆ ನಡೆಸುವ ಕಲೆಯಿಂದಷ್ಟೇ ಎನ್ನುವುದು ಸತ್ಯ. ಮೊನ್ನೆ ನಾ ಅಂದುಕೊಳ್ಳುತ್ತಿದ್ದೆ, "ಎಲ್ಲರೂ ಊಟ ಮಾಡುತ್ತಾರೆ. ಆದರೆ ಅಡಿಗೆ ಕೆಲಸದ ಜವಬ್ದಾರಿಯನ್ನು ಮಾತ್ರ ಯಾಕೆ ಒಂದು ಗುಂಪಿಗೆ ಹೊರಿಸಲಾಗಿದೆ ಇದು ಬದಲಾವಣೆಯಾದಾಗ ಮಾತ್ರ ಮನೆಯಲ್ಲಿ ನೆಮ್ಮದಿ ಸಿಗಲ್ಲ ಅಲ್ಲವೇ

ತನ್ನ ಕೆಲಸ ಕಾರ್ಯ, ತನ್ನ ಗೌರವವನ್ನು ಕಾಪಾಡಿಕೊಳ್ಳಲು ಹೆಣ್ಣು ಯಾವಾಗಲೂ ಮುಂದಾಗಬೇಕು. ಹೆಣ್ಣು ಎಂದು ಗೌರವ ಕೊಡುವುದಕ್ಕಿಂತ ಆಕೆಯೂ ಮನುಷ್ಯಳು ಎಂದು ಗೌರವಿಸುವ ಪದ್ಧತಿ ಶುರುವಾಗಬೇಕಿದೆ.

ನಮ್ಮ ಸಮಾಜದಲ್ಲಿ ನಡೆಯುವ ಮಹಿಳಾ ದೌರ್ಜನ್ಯ ನಿಲ್ಲಬೇಕಾಗಿದೆ ಮಹಿಳೆಯರಿಗೆ ರಕ್ಷಣೆ ಕೊಡುವ ಕಟ್ಟುನಿಟ್ಟಿನ ಕಾಯ್ದೆಗಳು ಬರಬೇಕಾಗಿದೆ. ಧಾರ್ಮಿಕ ಕಾರಣದಿಂದ ಮಹಿಳೆಯರ ಮೇಲೆ ನಡೆಯುವ ಅನೇಕ ಹಿಂಸೆ ಸೇರಿದಂತೆ ಅವರಿಗೂ ಕೂಡ ಸ್ವಾತಂತ್ರ್ಯವಿದೆ ಎಂಬುದನ್ನು ನಾವೆಲ್ಲರೂ ತಿಳಿದುಕೊಳ್ಳಬೇಕಾಗಿದೆ. ಹೆಣ್ಣು ಮತ್ತು ಗಂಡು ಎಂಬ ಜಾತಿಗಳು ಒಂದು ರಥದ ಚಕ್ರದಂತೆ ಆ ರಥ ಮುಂದೆ ಸಾಗಬೇಕಾದರೆ ಇಬ್ಬರು ಬೇಕು ಹೀಗಾಗಿ ವರ್ಷದಲ್ಲಿ ಕೇವಲ ಒಂದು ದಿನ ಮಹಿಳೆಯರಿಗೆ ಸ್ವಾತಂತ್ರ್ಯ ಹೇಳಿದರೆ ಸಾಲದು. ಪ್ರತಿದಿನ ಕೂಡ ಇರಬೇಕು.
ಲೇಖನ
: ರಾಘವೇಂದ್ರ ಪ್ರಭು ಕರ್ವಾಲು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ