ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ನಗರದ ಪ್ರತಿಷ್ಠಿತ ವಿದ್ಯಾ ಸಂಸ್ಥೆಗಳಲ್ಲೊಂದಾದ ನ್ಯಾಷನಲ್ ಪ್ರೈ ಡ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಆಚರಿಸಲಾಯಿತು.
ವಿಶ್ವ ಪರಿಸರ ದಿನದ ಅಂಗವಾಗಿ ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳಿಂದ ಸಸಿಗಳನ್ನು ನೆಡಿಸುವ ಮೂಲಕ ಪರಿಸರ ದಿನಾಚರಣೆಯನ್ನು ಅರ್ಥ ಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮವನ್ನು ಸಂಸ್ಥೆಯ ಕಾರ್ಯದರ್ಶಿ ಸತೀಶ್ ರಾಜ್ ಉದ್ಘಾಟಿಸಿ ಮಾತನಾಡಿ ಇಂದು ಜಾಗತಿಕ ಮಟ್ಟದಲ್ಲಿ ತಾಪಮಾನ ಕಡಿಮೆಯಾಗಲು ಹಾಗೂ ನಮ್ಮ ಮುಂದಿನ ಪೀಳಿಗೆಯ ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಪರಿಸರವನ್ನು ಕಾಪಾಡಿಕೊಂಡು ಬರಬೇಕಿದೆ. ಪ್ರಕೃತಿ ಉಳಿದರೆ ನಾವು ಉಳಿದಂತೆ ಗಿಡ ಮರಗಳನ್ನು ಬೆಳೆಸಿ ಹಸಿರಾಗಿಸುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ ಎಂದರು.
ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ನಿಮಿಷ ಅರುಣ್ ರವರು ಮಾತನಾಡಿ ಮಕ್ಕಳಿಗೆ ಪರಿಸರ ದಿನಾಚರಣೆಯ ಹಿನ್ನೆಲೆ ಪರಿಸರ ಸಂರಕ್ಷಣೆ ಪರಿಸರದ ಬಗ್ಗೆ ಕಾಳಜಿ ವಹಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಅದರಲ್ಲೂ ವಿಶೇಷವಾಗಿ ವಿದ್ಯಾರ್ಥಿಗಳು ಪರಿಸರದ ಬಗ್ಗೆ ಅತಿ ಹೆಚ್ಚು ಕಾಳಜಿ ವಹಿಸಬೇಕು ಎಂದು ಹೇಳಿದರು. ವಿದ್ಯಾರ್ಥಿಗಳಾದ ಇಬ್ಬನಿ, ಮನುಶ್ರೀ ಹಾಗೂ ಪೃಥ್ವಿ ಸಿದ್ದಾರ್ಥ್ ಪರಿಸರ ದಿನದ ಕುರಿತು ಭಾಷಣ ಮಾಡಿದರು.
ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ, ಚಿತ್ರಕಲೆ, ಹಾಗೂ ಆಶು ಭಾಷಣ ಸ್ಪರ್ಧೆಯನ್ನು ಆಯೋಜಿಸಿ ವಿಜೇತರಿಗೆ ಬಹುಮಾನವನ್ನು ನೀಡಲಾಯಿತು.
ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯಸ್ಥರಾದ ಶ್ರೀಮತಿ ರಶ್ಮಿ ಸತೀಶ್ ರಾಜ್ ರವರು ,ವಿದ್ಯಾರ್ಥಿಗಳು , ಶಿಕ್ಷಕರು ಮತ್ತು ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.



