Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತುರುವನೂರು ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Advertisement
Advertisement

 ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ತುರುವನೂರಿನ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಗಣೇಕಲ್ ಸಹೋದರರ ನೆನಪಿಗಾಗಿ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.

ಡಾ.ಶೀತಲ್ ಪ್ರಶಾಂತ ಗಿಡ ನೆಟ್ಟು ಮಾತನಾಡಿ ಇಡಿ ಸಕಲ ಜೀವ ರಾಶಿಗಳಿಗೆ ಗಿಡ ಮರಗಳು ನೀಡುತ್ತಿರುವ ಕೊಡುವ ಅನನ್ಯವಾದುದು. ಮಾನವನ ದುರಾಸೆಗೆ ಗಿಡ ಮರಗಳು ನಾಶವಾಗುತ್ತಿದ್ದು, ಬಿಸಿಲಿನ ತಾಪಮಾನ ಜಾಸ್ತಿಯಾಗತ್ತಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಒಂದೊಂದು ಗಿಡ ನೆಟ್ಟು ಪೋಷಿಸಿ ದೊಡ್ಡ ಮರವನ್ನಾಗಿ ಬೆಳೆಸಿದರೆ ಪರಿಸರಕ್ಕೆ ನೀಡುವ ಅದುವೆ ಬಹುದೊಡ್ಡ ಕೊಡುಗೆ ಎಂದು ಹೇಳಿದರು.

ರಾಮಲಿಂಗಪ್ಪ ಕಲ್ಯಾಣ ಮಂಟಪದ ಅಧ್ಯಕ್ಷ ಜಿ.ಚಿದಾನಂದಪ್ಪ ಮಾತನಾಡಿ ಮಾನವನ ಉಸಿರಾಟಕ್ಕೆ ಶುದ್ದ ಆಮ್ಲಜನಕವನ್ನು ನೀಡುವ ಗಿಡ-ಮರಗಳನ್ನು ಕಡಿಯದಂತೆ ಸಂರಕ್ಷಿಸಿ ಮುಂದಿನ ಪೀಳಿಗೆಗೆ ಹಸಿರು ಪರಿಸರವನ್ನು ಉಳಿಸಬೇಕಾಗಿರುವುದರಿಂದ ಎಲ್ಲೆಲ್ಲಿ ಖಾಲಿ ಜಾಗವಿದೆಯೋ ಅಲ್ಲೆಲ್ಲಾ ಗಿಡಗಳನ್ನು ನೆಟ್ಟು ನೀರುಣಿಸಿ ಪೋಷಿಸಬೇಕೆಂದು ಜನತೆಯಲ್ಲಿ ಮನವಿ ಮಾಡಿದರು.

ತುರುವನೂರು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೃಷ್ಣಪ್ಪ ಬಿ, ಉಪ ಪ್ರಾಚಾರ್ಯರಾದ ಕಿರಣ್ ಮಜಾಯ್ ಬಂಡಿಗಡ್, ಉಪನ್ಯಾಸಕರುಗಳಾದ

ಕೃಷ್ಣಮೂರ್ತಿ ಸಿ, ಓಬಳೇಶ್ ಎಂ.ಪಿ, ನಾಗೇಂದ್ರ ಚೌದರಿ, ವಿಜ್ಞಾನ ಶಿಕ್ಷಕ ರಾಜೇಶ್ ಎಲ್.ಎಂ, ವಿವೇಕಾನಂದಪ್ಪ, ಎಂ.ತಿಪ್ಪೇಸ್ವಾಮಿ, ಟಿ.ವಿ.ದಿನೇಶ್‌ಕುಮಾರ್, ಎಲ್.ವಿ.ಉಮೇಶ್ ಇವರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹಿರಿಯೂರು ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕಿ ಸಂಧ್ಯಾ ವೈ.ಎಸ್. ಕರ್ತವ್ಯದಿಂದ ಬಿಡುಗಡೆಅಕ್ರಮವಾಗಿ ಗಾಂಜವನ್ನು ಸಂಗ್ರಹಿಸಿಟ್ಟಿದ್ದ ವ್ಯಕ್ತಿಯ ಬಂಧನಧರ್ಮಸ್ಥಳ ಬುರುಡೆ ಪ್ರಕರಣ: ನಟ ಪ್ರಕಾಶ್‌ರಾಜ್‌ಹೆಸರು ಪ್ರಸ್ತಾಪ; ಗೃಹ ಸಚಿವರ ಪ್ರತಿಕ್ರಿಯೆಕಾಂಗ್ರೆಸ್ ನಾಯಕಿ ಮೀನಾಕ್ಷಿ ನಟರಾಜನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನೆಡೆಪೆಟ್ರೋಲ್ ಬಂಕ್‌ಗಳಲ್ಲಿ ಬಲ್ಕ್ ಇಂಧನ ಖರೀದಿಗೆ ಕೇಂದ್ರದ ಬ್ರೇಕ್: ದಿನಕ್ಕೆ 200 ಲೀಟರ್‌ಮಾತ್ರ ಮಿತಿ!ರೈತರ ತೀವ್ರ ವಿರೋಧದ ನಡುವೆ ಬಿಡದಿ ಟೌನ್ ಶಿಪ್ ಭೂ ಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಪ್ರಕಟಅನುದಾನ ಹಂಚಿಕೆಯಲ್ಲಿ ತಾರತಮ್ಯವಾಗಿಲ್ಲ, ಇದು ಅಂತಿಮ ಪಟ್ಟಿಯಲ್ಲ: ಸಿದ್ದರಾಮಯ್ಯ ಸ್ಪಷ್ಟನೆಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ತಮಿಳುನಾಡು ಸಿಎಂ 'ದಳಪತಿ' ವಿಜಯ್: ಕರವೇ ಪ್ರತಿಭಟನೆಮಾವಿನ ಹಣ್ಣು ತಿಂದ ಬೆನ್ನಲ್ಲೇ ಇಬ್ಬರು ಸಹೋದರಿಯರು ಸಾವು!NEET UG ಮರು ಪರೀಕ್ಷೆ: ವಿದ್ಯಾರ್ಥಿಗಳಿಗೆ 15 ನಿಮಿಷ ಹೆಚ್ಚುವರಿ