ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗದ ಸರ್ಕಾರಿ ಕಲಾ ಕಾಲೇಜಿನಲ್ಲಿ ಸಮಾಜಶಾಸ್ತ್ರದ ಸಹ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ನಯಾಜ್ ಅಹ್ಮದ್ ರವರಿಗೆ ಕುವೆಂಪು ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ನೀಡಿದೆ.
ಕುವೆಂಪು ವಿಶ್ವವಿದ್ಯಾಲಯ ಸಮಾಜಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರು ಆಗಿರುವ ಡಾ. ಚಂದ್ರಶೇಖರ ರವರ ಮಾರ್ಗದರ್ಶನದಲ್ಲಿ “ಮುಸಲ್ಮಾನರ ರಾಜಕೀಯ ಭಾಗವಹಿಸುವಿಕೆ:
ಒಂದು ಸಮಾಜಶಾಸ್ತ್ರೀಯ ಅಧ್ಯಯನ (ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಯ ಗ್ರಾಮ ಪಂಚಾಯತಿಗಳಿಗೆ ಸಂಬಂಧಿಸಿದಂತೆ)”. ಎಂಬ ವಿಷಯದ ಮೇಲೆ ಮಹಾಪ್ರಬಂಧ ಮಂಡಿಸಿ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ನಯಾಜ್ ಅಹ್ಮದ್ ಅವರಿಗೆ ಕಾಲೇಜಿನ ಪ್ರಾಂಶುಪಾಲರು, ಅಧ್ಯಾಪಕ ಮಿತ್ರರು ಅಭಿನಂದನೆ ಸಲ್ಲಿಸಿದ್ದಾರೆ.

