ಬೂತ್ ಮಟ್ಟದಲ್ಲಿ ಬಲಿಷ್ಠವಾಗಿ ಜೆಡಿಎಸ್ ಪಕ್ಷ ಕಟ್ಟಲು ಶ್ರಮಿಸಿ-ನಿಖಿಲ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಯಾದಗಿರಿ ಜಿಲ್ಲೆಯ ಸಪ್ತಪದಿ ಕನ್ವೆನ್ಷನ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ಜನರೊಂದಿಗೆ ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನದ ಕಾರ್ಯಕ್ರಮವನ್ನು ಪಕ್ಷದ ಮುಖಂಡರು ಹಾಗೂ ಹಿರಿಯ ಕಾರ್ಯಕರ್ತರೊಂದಿಗೆ ಉದ್ಘಾಟಿಸಿ ಸಭೆಯನ್ನ ಉದ್ದೇಶಿಸಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಾತನಾಡಿದರು.

- Advertisement - 

ಜೆಡಿಎಸ್ ಪಕ್ಷವನ್ನು ಯಾದಗಿರಿ ಜಿಲ್ಲೆಯಲ್ಲಿ ಬಲಿಷ್ಠವಾಗಿ ಕಟ್ಟುವ ನಿಟ್ಟಿನಲ್ಲಿ ಬೂತ್ ಮಟ್ಟದಲ್ಲಿ 9964002028 ಸಂಖ್ಯೆಗೆ ಮಿಸ್ಡ್ ಕಾಲ್ ಕೊಡಿಸುವ ಮೂಲಕ ಸದಸ್ಯತ್ವ ನೋಂದಣಿಯನ್ನು ಯಶಸ್ವಿಗೊಳಿಸಲು ಮನವಿ ಮಾಡಲಾಯಿತು.

- Advertisement - 

ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ ಅವರ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಸಾಧನೆಗಳ ಕುರಿತು ಮೆಲಕು ಹಾಕಿ, ರಾಜ್ಯ ಕಾಂಗ್ರೆಸ್ ಸರ್ಕಾರದ ದುರಾಡಳಿತವನ್ನು ಖಂಡಿಸಲಾಯಿತು.
 2028ಕ್ಕೆ ಮತ್ತೊಮ್ಮೆ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಗಳನ್ನಾಗಿ ಆಯ್ಕೆ ಮಾಡಲು ನಾವೆಲ್ಲರೂ ಶ್ರಮಿಸೋಣ ಎಂದು ತಿಳಿಸಲಾಯಿತು.

ಈ ಸಂದರ್ಭದಲ್ಲಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ, ಮಾಜಿ ಸಚಿವ ವೆಂಟರಾವ್ ನಾಡಗೌಡ, ಶಾಸಕ ಶರಣಗೌಡ್ ಕಂದಕೂರ, ಮಾಜಿ ಶಾಸಕರಾದ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ್, ರಾಜಾ ವೆಂಕಟಪ್ಪ ನಾಯಕ್, ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ರಶ್ಮಿ ರಾಮೇಗೌಡ,

- Advertisement - 

ಯಾದಗಿರಿ  ಜಿಲ್ಲಾಧ್ಯಕ್ಷ ಸುಭಾಷ್ ಕಟಕಟಿ, ಕಲಬುರಗಿ ಜಿಲ್ಲಾಧ್ಯಕ್ಷ ಬಾಲರಾಜ್ ಗುತ್ತೇದಾರ್ಮುಖಂಡರಾದ ಗುರು ಪಾಟೀಲ್, ಚೆನ್ನಪ್ಪಗೌಡ, ಎಸ್‌.ವಿ. ಪಾಟೀಲ್, ನಾಗರತ್ನ ಮೂರ್ತಿ, ಅನಸವುದ್ದಿನ್, ಬಂಡಪ್ಪ ಅರಳಿ, ರಾಮಣ್ಣ , ಜಯಶ್ರೀ ರೆಡ್ಡಿ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.

Share This Article
error: Content is protected !!
";