ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಲಾವಣ್ಯ ಶಿಕ್ಷಣ ಮಹಾವಿದ್ಯಾಲಯ (ಬಿಎಡ್) ಕಾಲೇಜಿನಲ್ಲಿ ಬಿಎಡ್ ವ್ಯಾಸಂಗ ಮಾಡುತ್ತಿರುವ ನಿತೀನ್ ಬಿ ಎಸ್ ಎಂಬ ವಿದ್ಯಾರ್ಥಿಯು ರಾಜ್ಯ ಮಟ್ಟದ ಟೆಕ್ವಾಂಡೊ (63-68) ವಿಭಾಗದಲ್ಲಿ ಭಾಗವಹಿಸಿ ಚಿನ್ನದ ಪದಕ ಪಡೆದು ಕೊಂಡು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ನಿತಿನ್ ಸಾಧನೆಗೆ ಆಡಳಿತ ಮಂಡಳಿಯ ಗೌರವ ಕಾರ್ಯದರ್ಶಿಗಳು ಹಾಗೂ ಟಿಎಪಿಸಿಎಂಎಸ್ ನಿರ್ದೇಶಕ ವಿಶ್ವಾಸ್ ಹನುಮಂತೇಗೌಡ, ಪ್ರಾಂಶುಪಾಲ ಜಿ. ಕೃಷ್ಣಮೂರ್ತಿ, ಉಪನ್ಯಾಸಕರು ಅಭಿನಂದಿಸಿ ರಾಷ್ಟ್ರೀಯ ಮಟ್ಟದಲ್ಲೂ ಉತ್ತಮ ಸಾಧನೆ ಮಾಡಲೆಂದು ಹಾರೈಸಿದ್ದಾರೆ.

