ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಯುವನಿಧಿ ಯೋಜನೆಯಡಿ ನೋಂದಾಯಿತರಾಗಿ ನಿರುದ್ಯೋಗ ಭತ್ಯೆಯನ್ನು ಪಡೆಯುತ್ತಿರುವ ಫಲಾನುಭವಿಗಳು ಕೌಶಲ್ಯ ತರಬೇತಿ ಮತ್ತು ಉದ್ಯಮಶೀಲತೆ ತರಬೇತಿಯನ್ನು ಪಡೆಯಲು ಕೌಶಲ್ಕರ್ ಪೋರ್ಟಲ್ನಲ್ಲಿ ಕಡ್ಡಾಯವಾಗಿ ನೊಂದಣಿಯಾಗಲು ಸೂಚಿಸಲಾಗಿದೆ.
ತರಬೇತಿ ಅವಧಿಯಲ್ಲಿ ಯುವನಿಧಿ ನಿರುದ್ಯೋಗ ಭತ್ಯೆಯನ್ನು ಪಡೆಯಲು ಯಾವುದೇ ತೊಂದರೆ ಇರುವುದಿಲ್ಲ. ಫಲಾನುಭವಿಗಳು ಕೌಶಲ್ಕರ್ ಪೋರ್ಟ್ನಲ್ಲಿ ನೊಂದಾಯಿಸದಿದ್ದರೆ, ಅವರ ಭತ್ಯ ಸ್ಥಗಿತಗೊಳಿಸುವ ಷರತ್ತು ವಿಧಿಸಲಾಗಿದೆ.
ಔದ್ಯೋಗಿಕ ಬೇಡಿಕೆಗಳ ಅನುಸಾರವಾಗಿ ಕೌಶಲ್ಯ ತರಬೇತಿ ಮತ್ತು ಉದ್ಯಮಶೀಲತೆ ತರಬೇತಿ ನೀಡಿ ಶೇ.70 ರಷ್ಟು ಅಭ್ಯರ್ಥಿಗಳಿಗೆ ಉದ್ಯೋಗ ಒದಗಿಸಲಾಗುವುದು. ಫಲಾನುಭವಿಗಳು ತಿ www.kaushalkar.com/app/registration-verify ಕೌಶಲ್ಕರ್ ಈ ಪೋರ್ಟಲ್ನಲ್ಲಿ ನೊಂದಾಯಿಸಿಕೊಂಡು ತರಬೇತಿಯ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.

