ಏ.19ಕ್ಕೆ ಸಾಸಲು ಚಿನ್ನಮ್ಮ ಉತ್ಸವ : ಬಂಡಿ ಮೂಲಕ ಮೆರವಣಿಗೆ
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ತಾಲ್ಲೂಕಿನ ಸಾಸಲು ಹೋಬಳಿಕೇಂದ್ರದ ಡಾ.ಬಿ.ಆರ್.ಅಂಬೇಡ್ಕರ್ ಪ್ರೌಢಶಾಲಾ ಆವರಣದಲ್ಲಿ ಏ.19 ರಂದು ಭಾನುವಾರ ಸಾಸಲು ಚಿನ್ನಮ್ಮ ಉತ್ಸವ ನಡೆಯಲಿದೆ. ಸಾಸಲು ಹೋಬಳಿಚಿನ್ನಮ್ಮ ಉತ್ಸವ ಸಮಿತಿ ವತಿಯಿಂದ ಮೊದಲ ಬಾರಿಗೆ ನಡೆಯುತ್ತಿರುವ ಸಾಸಲು ಚಿನ್ನಮ್ಮ ಉತ್ಸವ-2026 ಕಾರ್ಯಕ್ರಮವನ್ನು ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ ಡಾ.ಡಿ.ಕೆ.ಚಿತ್ತಯ್ಯ ಪೂಜಾರ್ ಉದ್ಘಾಟಿಸಲಿದ್ದಾರೆ ಎಂದು ತಾ.ಪಂ ಮಾಜಿ ಅಧ್ಯಕ್ಷ ಲಾವಣ್ಯ ನಾಗರಾಜ್ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಸಾಸಲು ಚಿನ್ನಮ್ಮ ಉತ್ಸವ ಏ.19ರ ಬೆಳಗ್ಗೆ 8 ಗಂಟೆಗೆ ಸಾದ್ವಿಮಣೆ ಸಾಸಲು ಚಿನ್ನಮ್ಮ ದೇವಾಲಯ ಮುಂಭಾಗದಿಂದ ಡಾ.ಬಿ.ಆರ್. ಅಂಬೇಡ್ಕರ್ ಪ್ರೌಢಶಾಲೆಯ ಸಾಸಲು ಚೆನ್ನಮ್ಮ ಉತ್ಸವ ವೇದಿಕೆ ತನಕ ಜಾನಪದ ಕಲಾ ತಂಡಗಳೊಂದಿಗೆ ಸಾಸಲು ಚಿನ್ನಮ್ಮ ಮೂರ್ತಿಯನ್ನು ಚಿಲಕಲ ಬಂಡಿ ಮೂಲಕ ಮೆರವಣಿಗೆ ನಡೆಯುತ್ತದೆ ಎಂದರು.
ಸಾಸಲು ಚಿನ್ನಮ್ಮ ಉತ್ಸವದ ಮುಖ್ಯ ವೇದಿಕೆಯಲ್ಲಿಬಜಾನಪದ ವಿದ್ವಾಂಸರಾದ ಸಣ್ಣ ನಾಗಪ್ಪನವರಿಂದ ಸಾಸಲು ಚಿನ್ನಮ್ಮ ಪರಿಚಯದ ಕಿರುಪುಸ್ತಕ ಬಿಡುಗಡೆ ಮಾಡುತ್ತಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಧೀರಾಜ್ ಮುನಿರಾಜು, ಶಾಸಕರು, ಮಾಜಿ ಶಾಸಕ ಟಿ.ವೆಂಕಟರಮಣಯ್ಯ, ಕಿಮ್ಸ್ ಆಸ್ಪತ್ರೆ ಮಾಜಿ ಅಧ್ಯಕ್ಷರಾದ ಬಿ. ಮುನೇಗೌಡ ಭಾಗವಹಿಸುವರು. ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು ಅಧ್ಯಕ್ಷತೆ ವಹಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿರುತ್ತದೆ. ಸಾಸಲು ಹೋಬಳಿ ಕುರಿತು ಚಿಂತನ-ಮಂಥನ ವಿಚಾರಗೋಷ್ಠಿ , ರಾತ್ರಿ 7 ಗಂಟೆಗೆ ಸಾಸಲು ಚೆನ್ನಮ್ಮ ಕುರಿತ ನಾಟಕ ನಡೆಯಲಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಗೌರವ ಕಾರ್ಯದರ್ಶಿ ಎ.ಜಯರಾಮ್, ಸಾಸಲು ಹೋಬಳಿ ಕಸಾಪ ಘಟಕದ ಅಧ್ಯಕ್ಷ ಜಿ.ಎಂ.ನಾಗರಾಜು, ಸಾಸಲು ಚಿನ್ನಮ್ಮ ಉತ್ಸವ ಸಮಿತಿಯ ಮುಖಂಡರುಗಳಾದ ವಕೀಲರಾದ ನರಸಿಂಹಗೌಡ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್, ಗ್ರಾಮಪಂಚಾಯಿತಿ ಸದಸ್ಯ ಪಚ್ಚಾರಹಳ್ಳಿ ರಮೇಶ್, ಉಪನ್ಯಾಸಕ ಕೇಶವಮೂರ್ತಿ, ಚಂದ್ರಶೇಖರ್ ಮುಂತಾದವರು ಭಾಗವಹಿಸಿದ್ದರು.

