ಆಪರೇಷನ್ ಸಿಂಧೂರ ಕಾರ್ಯಾಚರಣೆ ಯಶಸ್ವಿ : ತಿರಂಗಾ ಯಾತ್ರೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
 ಆಪರೇಷನ್ ಸಿಂಧೂರ ಕಾರ್ಯಾಚರಣೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಬೆಂಗಳೂರಿನ ಸಂಪಿಗೆ ರಸ್ತೆಯ ಶಿರೂರು ಪಾರ್ಕ್‌ನಿಂದ ಮಲ್ಲೇಶ್ವರದ ೧೮ನೇ ಅಡ್ಡರಸ್ತೆವರೆಗೆ ನಡೆದ ತಿರಂಗಾ ಯಾತ್ರೆ ನಡೆಸಿ, ಭಾರತೀಯ ಸೇನೆಯ ಛಲ, ಸಾಹಸ, ಶೌರ್ಯಗಳನ್ನು ಸ್ಮರಿಸಲಾಯಿತು ಎಂದು ಆರ್ ಅಶೋಕ್ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ರಾಜ್ಯ ಉಸ್ತುವಾರಿ ಅಗರ್‌ವಾಲ್ ರಾಜ್ಯ ಸಹ ಉಸ್ತುವಾರಿ ರೆಡ್ಡಿ ಸುಧಾಕರ್, ವಿಧಾನ ಪರಿಷತ್ ವಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕರಾದ ಡಾ. ಅಶ್ವಥ್ ಸಿ.ಎನ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಎನ್ ಎಸ್ ನದೀಶ್ ,

ಮಾಜಿ ಸಚಿವರಾದ ಬಸವರಾಜ, ಮುನಿರತ್ನ, ಗೋಪಾಲಯ್ಯ, ಚ.ಟಿ ರವಿ , ನಿವೃತ್ತ ಏರ್ ಮಾರ್ಷಲ್ ಎ.ವಿ. ಮುರುಳಿ, ಮಾಜಿ ಸಂಸದ ಮುನಿಸ್ವಾಮಿ, ಶಾಸಕರುಗಳು, ಮಾಜಿ ಶಾಸಕರು, ಪರಿಷತ್ ಸದಸ್ಯರು, ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು, ಪ್ರಮುಖರು, ಅಪಾರ ಸಂಖ್ಯೆಯಲ್ಲಿ ದೇಶಭಕ್ತರು ಉಪಸ್ಥಿತರಿದ್ದರು.

 

 

Share This Article
error: Content is protected !!
";