ಆಪರೇಷನ್ ಸಿಂಧೂರ್ ಬೆನ್ನಲ್ಲೇ ಶಾಂತಿ ಮಂತ್ರ ಜಪಿಸಿ ಪೇಚಿಗೆ ಸಿಲುಕಿದ ಕಾಂಗ್ರೆಸ್

News Desk

ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಆಪರೇಷನ್ ಸಿಂಧೂರ್ ಬೆನ್ನಲ್ಲೇ ಶಾಂತಿ ಮಂತ್ರ
ಜಪಿಸಿ ಪೇಚಿಗೆ ಸಿಲುಕಿದ ಕಾಂಗ್ರೆಸ್, ಟ್ವೀಟ್ ಡಿಲೀಟ್ ಮಾಡಿತ್ತಲ್ಲದೆ, Indian Army ಹೊಗಳಿ ಮತ್ತೊಂದು ಪೋಸ್ಟ್! ಹಾಕಿದ್ದರಿಂದ ಸ್ವಪಕ್ಷೀಯರಿಂದಲೇ ವಿರೋಧ! ವ್ಯಕ್ತವಾಗಿದೆ.

26 ಮಂದಿ ಸಾವು, ಹಲವರಿಗೆ ಗಾಯ ಗುರುವಾರ ಬೆಳಗ್ಗೆಯಿಂದ ನಡೆಯುತ್ತಿರುವ ಆತ್ಮಹತ್ಯಾ ಡ್ರೋನ್ ದಾಳಿಯಲ್ಲಿ ಈ ವರೆಗೂ 26 ಮಂದಿ ಸಾವನ್ನಪ್ಪಿ ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಪ್ರಮುಖವಾಗಿ ಈ ಆತ್ಮಹತ್ಯಾ ಡ್ರೋನ್ ದಾಳಿಗಳು ಲಾಹೋರ್ ನ ವಾಲ್ಟನ್ ವಿಮಾನ ನಿಲ್ದಾಣದ ಬಳಿಯ ಗೋಪಾಲ್ ನಗರ ಮತ್ತು ನಸೀರಾಬಾದ್ ಪ್ರದೇಶಗಳಲ್ಲಿ ನಡೆದಿವೆ ಎನ್ನಲಾಗಿದೆ.

ವಿಡಿಯೋ ವೈರಲ್-
ಡ್ರೋನ್ ದಾಳಿ ಬೆನ್ನಲ್ಲೇ ಪಾಕಿಸ್ತಾನದ ಜನರು ಭಯಭೀತರಾಗಿ ತಮ್ಮ ಮನೆಗಳಿಂದ ಹೊರಗೆ ಓಡಿ ಹೋಗುತ್ತಿರುವ ದೃಶ್ಯಗಳು ಮತ್ತು ದಾಳಿ ನಡೆದ ಕಟ್ಟಡಗಳಿಂದ ಹೊಗೆ ಬರುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದೆ.
5-6 ಅಡಿ ಅಳತೆಯ ಡ್ರೋನ್‌ನಿಂದ ಸ್ಫೋಟ ಸಂಭವಿಸಿರಬಹುದು ಎಂದು ಪೊಲೀಸ್ ಮೂಲಗಳು ಮಾಧ್ಯಮಗಳಿಗೆ ತಿಳಿಸಿವೆ.

ಡ್ರೋನ್ ದಾಳಿ ನಡೆದ ಈ ಪ್ರದೇಶವು ಲಾಹೋರ್‌ನ ಐಷಾರಾಮಿ ಕೇಂದ್ರ ವ್ಯಾಪಾರ ಜಿಲ್ಲೆ ಮತ್ತು ಲಾಹೋರ್ ಸೇನಾ ಕಂಟೋನ್ಮೆಂಟ್‌ಗೆ ಹೊಂದಿಕೊಂಡಿದೆ. ಸಿಯಾಲ್‌ಕೋಟ್, ಕರಾಚಿ ಮತ್ತು ಲಾಹೋರ್ ವಿಮಾನ ನಿಲ್ದಾಣಗಳಲ್ಲಿ ವಿಮಾನ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಸ್ಥಳೀಯ ವರದಿಗಳು ತಿಳಿಸಿವೆ.ದಾಳಿ ನಡೆಸಲು ಬಂದ ಡ್ರೋನ್ ಗಳ ಪೈಕಿ ಸುಮಾರು 12 ಡ್ರೋನ್ ಗಳನ್ನು ಹೊಡೆದುರುಳಿಸಿರುವುದಾಗಿ ಪಾಕ್ ಸೇನೆ ಹೇಳಿಕೊಂಡಿದೆ. ವ್ಯವಸ್ಥೆಯನ್ನು ಜ್ಯಾಮ್ ಮಾಡುವ ಮೂಲಕ ಡ್ರೋನ್ ಅನ್ನು ಹೊಡೆದುರುಳಿಸಲಾಗಿದೆ ಎಂದು ಸೇನೆ ಮಾಹಿತಿ ನೀಡಿದೆ. ಆದಾಗ್ಯೂ ಡ್ರೋನ್ ಗಳ ಮೂಲ ಪತ್ತೆ ಮಾಡಲು ಪೊಲೀಸರು ತೀವ್ರ ತನಿಖೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

 

Share This Article
error: Content is protected !!
";