ವಿಪಕ್ಷ ಶಾಸಕರು ಅನುದಾನಕ್ಕಾಗಿ ತಾಳ್ಮೆಯಿಂದ ಕಾಯಬೇಕು ಎಂದರೆ ಏನಾರ್ಥ ಡಿಸಿಎಂ ಅವರೇ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಡಿಸಿಎಂ ಡಿ.ಕೆ ಶಿವಕುಮಾರ್ ಅವರೇ, ಕ್ಷೇತ್ರದ ಅನುದಾನಕ್ಕಾಗಿ ವಿಪಕ್ಷದ ಶಾಸಕರು ತಾಳ್ಮೆಯಿಂದ ಕಾಯಬೇಕು ಎಂದರೆ ಏನು ಸ್ವಾಮಿ? ಎಂದು ವಿಪಕ್ಷ ನಾಯಕ ಆರ್.ಅಶೋಕ್ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

ತಾವು ಈ ಮೊದಲೇ ಹೇಳಿರುವಂತೆ ಶಾಸಕರು ತಮ್ಮ ಬಳಿ ತಗ್ಗಿ-ಬಗ್ಗಿ ನಡೆಯಬೇಕು ಎನ್ನುವುದು ನಿಮ್ಮ ಮಾತಿನ ಅರ್ಥಾನಾ? ಅಥವಾ ತಾಳ್ಮೆಯಿಂದ ಇರದಿದ್ದರೆ ನಟ್ಟು-ಬೋಲ್ಟು ಟೈಟು ಮಾಡುತ್ತೇನೆ ಎನ್ನುವ ಧಮ್ಕಿನಾ?

- Advertisement - 

ತಮಗೆ ಇಷ್ಟ ಬಂದ ಹಾಗೆ ಬರೀ ಕಾಂಗ್ರೆಸ್ ಶಾಸಕರಿಗೆ ಮಾತ್ರ ಅನುದಾನ ಕೊಡೋಕೆ ರಾಜ್ಯ ಸರ್ಕಾರದ ಖಜಾನೆ ನಿಮ್ಮ ಕರ್ನಾಟಕ ಕಾಂಗ್ರೆಸ್ ಪಕ್ಷದ ಪಾರ್ಟಿ ಫಂಡ್ ಅಲ್ಲ ಡಿ.ಕೆ.ಶಿವಕುಮಾರ್ ಅವರೇ, ಅದು ಆರೂವರೆ ಕೋಟಿ ಕನ್ನಡಿಗರ ಬೆವರಿನ ತೆರಿಗೆ ಹಣ.

ಈ ಮಲತಾಯಿ ದೋರಣೆ ನಿಲ್ಲಿಸಿ, ಎಲ್ಲಾ ಕ್ಷೇತ್ರಗಳಿಗೂ ಅನುದಾನ ಬಿಡುಗಡೆ ಮಾಡಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ ಮಾಡಿದ್ದಾರೆ.

- Advertisement - 

 

 

Share This Article
error: Content is protected !!
";