ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಕಾರ್ಯ ಚಟುವಟಿಕೆಗಳು ಮತ್ತು ಉತ್ಪನ್ನಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲು “ರೈತ ಸಂತೆ”ಯನ್ನು ಏಪ್ರಿಲ್ 26 ರಂದು ಬೆಳಿಗ್ಗೆ 7.00 ರಿಂದ ಸಂಜೆ 4.00 ಗಂಟೆಯವರೆಗೆ ಬೆಂಗಳೂರಿನ ಜಿ.ಕೆ.ವಿ.ಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ರೈತರ ಸಂತೆಯಲ್ಲಿ ಕೃಷಿ ಉತ್ಪನ್ನ / ಪರಿಕರಗಳ ಪ್ರದರ್ಶನ ಮತ್ತು ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಿತ್ತನೆ ಬೀಜಗಳು, ಸಿರಿಧಾನ್ಯಗಳ ಮೌಲ್ಯವರ್ಧಿತ ಉತ್ಪನ್ನಗಳು, ಸಾವಯವ ಉತ್ಪನ್ನಗಳು, ತೋಟಗಾರಿಕೆ: ಹಣ್ಣುಗಳು, ಸುಗಂಧ ಮತ್ತು ಔಷಧೀಯ ಸಸ್ಯಗಳು, ಜೈವಿಕ ಗೊಬ್ಬರಗಳು,
ಕೃಷಿ ಯಂತ್ರೋಪಕರಣಗಳು, ಎರೆಹುಳು ಗೊಬ್ಬರ, ಸಸ್ಯ ಸಂರಕ್ಷಣೆ: ಜೈವಿಕ ಕೀಟನಾಶಕಗಳು, ಗುಣಮಟ್ಟದ ಪದಾರ್ಥಗಳು ಪರಿಕರಗಳು, ಕರಕುಶಲ ವಸ್ಥುಗಳು: ಗವ್ಯೋತ್ಪನ್ನಗಳು, ಅಡಿಕೆ ಉತ್ಪನ್ನಗಳು, ರೇಷ್ಮೆ ಕೃಷಿಯ ಉಪ–ಉತ್ಪನ್ನಗಳು, ಅಣಬೆ, ಜೇನು ಕೃಷಿ, ವಾಣಿಜ್ಯೀಕರಣ ಉತ್ಪನ್ನಗಳು, ಪಶು ಸಂಗೋಪನೆ, ಕೃಷಿ ಪ್ರಕಟಣೆಗಳು, ವಿಶ್ವವಿದ್ಯಾನಿಲಯದ ಬಗ್ಗೆ ಮಾಹಿತಿ,
ತಾರಸಿ ಕೈತೋಟ / ನಗರ ತೋಟಗಾರಿಕೆ ಇನ್ನು ಮುಂತಾದ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟದ ವ್ಯವಸ್ಥೆಯಿರುತ್ತದೆ. ಸಾರ್ವಜನಿಕರು ಮತ್ತು ರೈತರು ಈ ವಿನೂತನ ಸಂತೆಯ ಪ್ರಯೋಜನ ಪಡೆದುಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.