ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ನೇತೃತ್ವದಲ್ಲಿ ಸಂಘಟನಾ ಸಭೆ

News Desk

ಚಂದ್ರವಳ್ಳಿ ನ್ಯೂಸ್, ತುಮಕೂರು:
ತುಮಕೂರು ಹೊರ ವಲಯದ ವೀವಾ ರೆಸಾರ್ಟ್ ನಲ್ಲಿ ಜೆಡಿಎಸ್ ಪಕ್ಷ ಸಂಘಟನೆಯ ಉದ್ದೇಶದಿಂದ ತುಮಕೂರು ಜಿಲ್ಲಾ ಜೆಡಿಎಸ್ ಹಾಲಿ ಮತ್ತು ಮಾಜಿ ಶಾಸಕರ
, ಜಿಲ್ಲೆಯ ಎಲ್ಲಾ ಅಭ್ಯರ್ಥಿಗಳು ಹಾಗೂ ನಮ್ಮ ಯುವ ನಾಯಕರು ಭವಿಷ್ಯದ ಆಧಾರಸ್ತಂಭ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ರವರ ನೇತೃತ್ವದಲ್ಲಿ ಸಂಘಟನಾ ಸಭೆ ನಡೆಯಿತು..

 ಸಭೆಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಜೆಡಿಎಸ್  ಜಿಲ್ಲಾಧ್ಯಕ್ಷ ಆರ್ ಸಿ ಅಂಜನಪ್ಪ, ಅಧ್ಯಕ್ಷ ಬಿ.ಎಸ್.ಸತ್ಯಪ್ರಕಾಶ್, ಎಸ್ ಆರ್ ಗೌಡ್ರು, ಮದುಮಡುಗು ರಂಗಸ್ವಾಮಿ, ಜೆಡಿಎಸ್ ಪಕ್ಷದ ಎಲ್ಲಾ ಹಿರಿಯ ಕಿರಿಯ ಮುಖಂಡರುಗಳು ಕಾರ್ಯಕರ್ತರು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

 

Share This Article
error: Content is protected !!
";