ರಾಜಸ್ಥಾನಕ್ಕೆ ಲಗ್ಗೆಯಿಟ್ಟ ನಮ್ಮ ನಂದಿನಿ!

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕದ ಹೆಮ್ಮೆಯ ನಂದಿನಿ! ಹಾಲು ಮತ್ತು ಉತ್ಪನ್ನಗಳು ರಾಜಸ್ಥಾನಕ್ಕೆ ಲಗ್ಗೆಯಿಟ್ಟಿವೆ ಎಂದು ಕಾಂಗ್ರೆಸ್ ಹರ್ಷ ವ್ಯಕ್ತಪಡಿಸಿದೆ.

ಪರಿಶುದ್ಧತೆ ಹಾಗೂ ಗುಣಮಟ್ಟಕ್ಕೆ ಹೆಸರಾದ ನಂದಿನಿ ಹಾಲಿನಉತ್ಪನ್ನಗಳಿಗೆ ದೇಶದಾದ್ಯಂತ ಬೇಡಿಕೆ ವ್ಯಕ್ತವಾಗುತ್ತಿದ್ದು, ಹೊಸವರ್ಷಕ್ಕೆ ರಾಜಸ್ಥಾನದಲ್ಲೂ ತನ್ನ ಚಾಪು ಮೂಡಿಸಲು ಸಜ್ಜಾಗಿದೆ ಎಂದು ಕಾಂಗ್ರೆಸ್ ತಿಳಿಸಿದೆ.

- Advertisement - 

ಹಿಂದಿನ ಬಿಜೆಪಿ ಸರ್ಕಾರ ಗುಜರಾತಿನ ಅಮುಲ್ ಜೊತೆಗೆ ಕೆಎಂಎಫ್ ಅನ್ನು ವಿಲೀನಗೊಳಿಸಲು ಮುಂದಾಗಿತ್ತು. ಆದರೀಗ ರಾಜಧಾನಿ ದೆಹಲಿಯಲ್ಲೂ ಬಹು ಬೇಡಿಕೆ ಸೃಷ್ಟಿಸಿಕೊಂಡಿರುವ ನಂದಿನಿ ಉತ್ಪನ್ನಗಳು ಉತ್ತರದ ರಾಜ್ಯಗಳಿಗೆ ತನ್ನ ಮಾರುಕಟ್ಟೆ ವಿಸ್ತರಿಸುತ್ತಿದೆ ಎಂದು ಕಾಂಗ್ರೆಸ್ ತಿಳಿಸಿದೆ.

ರಾಜ್ಯದಲ್ಲಿ ಪ್ರತಿನಿತ್ಯ 1 ಕೋಟಿ ಲೀಟರ್‌ಗೂ ಹೆಚ್ಚು ಹಾಲು ಉತ್ಪಾದನೆಯಾಗುತ್ತಿದ್ದುಹೊರರಾಜ್ಯಗಳಿಗೂ ಸರಬರಾಜಾಗುತ್ತಿದೆ. ಕಾಂಗ್ರೆಸ್ ಸರ್ಕಾರ ಹೈನುಗಾರಿಕೆಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ. ಎಂದು ಕಾಂಗ್ರೆಸ್ ತಿಳಿಸಿದೆ.

- Advertisement - 

ಕರುನಾಡ ರೈತರು ಶ್ರಮದಿಂದ ಕಟ್ಟಿರುವ ಕೆಎಂಎಫ್ ಅನ್ನು ಉಳಿಸಿ, ಬೆಳೆಸುತ್ತೇವೆ ಎಂದು ಹಿಂದೆ ಕಾಂಗ್ರೆಸ್ ಸರ್ಕಾರ ಮಾತುಕೊಟ್ಟಿತ್ತು, ಈಗ ನುಡಿದಂತೆ  ನಡೆಯುತ್ತಿದೆ ಎಂದು ಕಾಂಗ್ರೆಸ್ ಹರ್ಷ ವ್ಯಕ್ತಪಡಿಸಿದೆ.

 

 

Share This Article
error: Content is protected !!
";