ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹೇಡಿ ಪಾಕಿಸ್ತಾನ ಜಮ್ಮು ಕಾಶ್ಮೀರದ ಎಲ್ಒಸಿಯಲ್ಲಿ ನಾಗರಿಕರನ್ನು ಗುರಿಯಾಗಿಸಿಕೊಂಡು ಸುಮಾರು 26 ಪ್ರದೇಶಗಳ ಮೇಲೆ ನಿರಂತರವಾಗಿ ದಾಳಿ ನಡೆಸುತ್ತಿದೆ.
ಪಂಜಾಬ್ಏರ್ಬೇಸ್ಸೇರಿದಂತೆ ಭಾರತೀಯ ನೌಕಾನೆಲೆಗಳನ್ನು ಟಾರ್ಗೆಟ್ಮಾಡಿಕೊಂಡು ರಾತ್ರಿ ಕ್ಷಿಪಣಿ ಹಾಗೂ ಡ್ರೋಣ್ಮೂಲಕ ದಾಳಿಗೆ ಯತ್ನಿಸಿದ್ದು, ಭಾರತದ ಸಶಸ್ತ್ರ ಪಡೆಗಳು ಅವುಗಳನ್ನು ಯಶಸ್ವಿಯಾಗಿ ನಿಷ್ಕ್ರಿಯಗೊಳಿಸಿದೆ. ಅಪ್ರಚೋದಿತ ದಾಳಿ ನಡೆಸುತ್ತಿರುವ ಪಾಕಿಸ್ತಾನ ಭಾರತದ ವಿರುದ್ಧ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದೆ ಎಂದು ವಿಂಗ್ಕಮಾಂಡರ್ವ್ಯೋಮಿಕಾ ಸಿಂಗ್ ಮಾಹಿತಿ ನೀಡಿದ್ದಾರೆ.