ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭಾರತದ ಗಡಿ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಮೇ 8 ರಂದು ಪಾಕಿಸ್ತಾನ ಸೇನೆ ನಡೆಸಿದ ಕ್ಷಿಪಣಿ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ತೀವ್ರಗೊಂಡಿದೆ.
ಭಾರತೀಯ ಸೇನೆ ವಾಯು ರಕ್ಷಣಾ ವ್ಯವಸ್ಥೆಗಳನ್ನು ಬಳಸಿಕೊಂಡು ಒಳಬರುವ ಎಲ್ಲಾ ಕ್ಷಿಪಣಿಗಳನ್ನು ಯಶಸ್ವಿಯಾಗಿ ತಡೆದು ನಾಶಪಡಿಸಿದೆ. ಅಲ್ಲದೆ ಭಾರತೀಯ ಸೇನೆಯು ವಾಯುಪ್ರದೇಶವನ್ನು ಉಲ್ಲಂಘಿಸಲು ಪ್ರಯತ್ನಿಸಿದ ಮೂರು ಪಾಕಿಸ್ತಾನಿ ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದೆ.
ಭಾರತದಿಂದ ವಾಟರ್ ಸ್ಟ್ರೈಕ್:
ಪಾಕಿಸ್ತಾನಕ್ಕೆ ಭಾರತ ಇದೀಗ ಸಲಾಲ್ ಹಾಗೂ ಬಾಗ್ಲಿಹಾರ್ ಅಣೆಕಟ್ಟುಗಳಿಂದ ನೀರು ಬಿಡುಗಡೆ ಮಾಡಿದ್ದು, ಪ್ರವಾಹ ಭೀತಿ ಎದುರಾಗಿದೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.
ಮೇ 6-7ರ ರಾತ್ರಿ ಭಾರತ ಪಾಕಿಸ್ತಾನ ಮತ್ತು ಪಿಒಕೆಯಲ್ಲಿನ 9 ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ಮಾಡಿ ನಾಶಪಡಿಸಿತ್ತು. ಭಾರತದ ವಾಯು ಸೇನೆ ಜೊತೆಗೆ ನೌಕಾಪಡೆಯು ಪಾಕಿಸ್ತಾನದ ವಿರುದ್ಧ ದಾಳಿಗೆ ಇಳಿದಿದೆ. ವಾಯು ಸೇನೆ ಹಾಗೂ ನೌಕಾಪಡೆಯು ಎರಡೂ ಜಂಟಿಯಾಗಿ ಅಟ್ಯಾಕ್ ಮಾಡುತ್ತಿವೆ.
ವಿರೋಧಿ ರಾಷ್ಟ್ರದ ಪ್ರಮುಖ ನಗರಗಳಾದ ಇಸ್ಲಾಮಾಬಾದ್, ಬಂದರು ನಗರಿ ಕರಾಚಿ ಮೇಲೆ ಭಾರತ ಅಟ್ಯಾಕ್ ಮಾಡಿದೆ. ದಾಳಿ ಮುಂದಿರೆದಿದ್ದು ಪಾಕಿಸ್ತಾನದ ಮೇಲೆ ನಿರಂತರ ಕ್ಷಿಪಣಿ ದಾಳಿ ನಡೆಸಲಾಗುತ್ತಿದೆ.