ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜ್ಯ ಪೊಲೀಸ್ಸಿಬ್ಬಂದಿಯ ಪೀಕ್ಕ್ಯಾಪ್ವಿತರಣೆ ಹಾಗೂ ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ ಉದ್ಘಾಟನೆ ಮತ್ತು ಸನ್ಮಿತ್ರ ಕೈಪಿಡಿ ಬಿಡುಗಡೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಗೃಹಸಚಿವರಾದ ಜಿ.ಪರಮೇಶ್ವರ್ಅವರೊಂದಿಗೆ ಭಾಗವಹಿಸಿದೆ. ಈ ವೇಳೆ ಹಳೇ ಕಾಲದ ಸ್ಲೋಚ್ಹ್ಯಾಟ್ಗೆ ವಿದಾಯ ಹೇಳಿ ಪೊಲೀಸ್ಸಿಬ್ಬಂದಿಗೆ ಹೊಸ ಪೀಕ್ಕ್ಯಾಪ್ವಿತರಣೆ ಮಾಡಲಾಯಿತು ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು.
ಪ್ರತಿಭಟನೆ, ಆರೋಪಿಯನ್ನು ಹಿಡಿಯಲು ಓಡುವಾಗ, ಲಾಠಿಪ್ರಹಾರದ ವೇಳೆ ಸ್ಲೋಚ್ಕ್ಯಾಪ್ಕೆಳಗೆ ಬೀಳುತ್ತಿತ್ತು. ಪೊಲೀಸರ ಹ್ಯಾಟ್ಕೆಳಗೆ ಬಿದ್ದರೆ ಸಮವಸ್ತ್ರಕ್ಕೆ ಅಗೌರವ ತೋರಿದಂತಾಗುತ್ತದೆ. ಹೀಗಾಗಿ ಕಳೆದ 4 ದಶಕಗಳಿಂದ ಪೀಕ್ಕ್ಯಾಪ್ನೀಡುವಂತೆ ಪೊಲೀಸರು ಬೇಡಿಕೆಯಿಟ್ಟಿದ್ದರು.
ಕೊನೆಗೆ ನಮ್ಮ ಸರ್ಕಾರ ಹೊಸ ಮಾದರಿಯ ಕಡು ನೀಲಿ ಬಣ್ಣದ ಪೀಕ್ಕ್ಯಾಪ್ವಿತರಿಸಲು ಒಪ್ಪಿಗೆ ನೀಡಿತ್ತು. ಹೊಸ ಪೀಕ್ಕ್ಯಾಪ್ನಲ್ಲಿ ಎಲಾಸ್ಟಿಕ್ಇರುವುದರಿಂದ ಪೊಲೀಸರ ತಲೆಯಲ್ಲಿ ಸರಿಯಾಗಿ ಕೂರಲಿವೆ. ಇಂದಿನಿಂದ ರಾಜ್ಯದ 1 ಲಕ್ಷ ಪೊಲೀಸ್ಸಿಬ್ಬಂದಿಗೆ ಹೊಸ ಪೀಕ್ಕ್ಯಾಪ್ನೀಡುತ್ತಿದ್ದೇವೆ ಎಂದು ಉಪಮುಖ್ಯಮಂತ್ರಿ ಶಿವಕುಮಾರ್ ತಿಳಿಸಿದರು.

