ಯಾತ್ರಿ ನಿವಾಸ ಹಸ್ತಾಂತರ: ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಹನುಮನಕಟ್ಟೆ ಕೆಂಚಾಂಬ ದೇವಸ್ಥಾನದ ಬಳಿ, ಸಾಸಲು ಭೂತಪ್ಪ ದೇವಸ್ಥಾನದ  ಬಳಿ ಹಾಗೂ ದುಮ್ಮಿಗೊಲ್ಲರಹಟ್ಟಿ ಜುಂಜಪ್ಪನ ದೇವಸ್ಥಾನದ ಬಳಿ ಯಾತ್ರಿ ನಿವಾಸ ನಿರ್ಮಿಸಲಾಗಿರುತ್ತದೆ. ಪ್ರತಿ ಯಾತ್ರಿ ನಿವಾಸಕ್ಕೆ ತಲಾ ರೂ.25 ಲಕ್ಷ ವೆಚ್ಚ ಭರಿಸಲಾಗಿರುತ್ತದೆ.

- Advertisement - 

ಯಾತ್ರಿ ನಿವಾಸ ಕಟ್ಟಡಗಳನ್ನು ಯಾರಾದರೂ ನಿರ್ವಹಣೆ ಮಾಡಲು ಇಚ್ಚಿಸಿದ್ದಲ್ಲಿ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಚಿತ್ರದುರ್ಗ ಕಚೇರಿಗೆ ಅರ್ಜಿ ಸಲ್ಲಿಸಬಹುದು.

- Advertisement - 

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಸಹಾಯಕ ನಿರ್ದೇಶಕರ ಕಚೇರಿ, ಕೋಟೆ ಸಮೀಪ, ಕಾಮನಬಾವಿ ಬಡಾವಣೆ, ಚಿತ್ರದುರ್ಗ ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

 

- Advertisement - 

Share This Article
error: Content is protected !!
";