ಪತ್ರಕರ್ತರ ಮೇಲೆ ಲಾಠಿಚಾರ್ಜ್ ಮಾಡಿದ ಪೊಲೀಸರು

News Desk

ಚಂದ್ರವಳ್ಳಿ ನ್ಯೂಸ್, ಇಸ್ಲಾಮಾಬಾದ್:
ಕಾಶ್ಮೀರ ಕ್ರಿಯಾ ಸಮಿತಿ ಆಯೋಜಿಸಿದ್ದ ಪ್ರತಿಭಟನೆಯ ಸಂದರ್ಭದಲ್ಲಿ ರಾಷ್ಟ್ರೀಯ ಪ್ರೆಸ್ ಕ್ಲಬ್ ಮೇಲೆ ಪೊಲೀಸ್ ದಾಳಿ ನಡೆಸಿ, ವಕೀಲರು ಹಾಗೂ ಪತ್ರಕರ್ತರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿರುವ ಘಟನೆ ಇಸ್ಲಾಮಾಬಾದ್​ನಲ್ಲಿ ನಡೆದಿದೆ.

ಆಕ್ರಮಿತ ಕಾಶ್ಮೀರದಲ್ಲಿ ನಡೆಯುತ್ತಿರುವ ದೌರ್ಜನ್ಯಗಳು ಮತ್ತು ಇಂಟರ್ನೆಟ್ ಕಡಿತದ ವಿರುದ್ಧ ಕಾಶ್ಮೀರ ಕ್ರಿಯಾ ಸಮಿತಿ ಆಯೋಜಿಸಿದ್ದ ಪ್ರತಿಭಟನೆ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

- Advertisement - 

ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಜನ ತಾರತಮ್ಯ ಖಂಡಿಸಿ ಪಾಕಿಸ್ತಾನ ಸರ್ಕಾರದ ವಿರುದ್ಧ ದಂಗೆ ಎದ್ದಿದ್ದು, ಅನಿರ್ದಿಷ್ಟಾವಧಿ ಪ್ರತಿಭಟನೆ 4ನೇ ದಿನ ಪೂರೈಸಿದೆ. 

ಇದನ್ನು ಹತ್ತಿಕ್ಕಲು ಪಾಕಿಸ್ತಾನ ಸರ್ಕಾರ ಲಾಠಿಚಾರ್ಜ್​, ಗೋಲಿಬಾರ್​​ನಂತಹ ಧಮನಕಾರಿ ನೀತಿ ಪ್ರದರ್ಶಿಸುತ್ತಿದೆ. ಇಸ್ಲಾಮಾಬಾದ್ ಪೊಲೀಸರು ಬಲವಂತವಾಗಿ ಪ್ರೆಸ್​​ಕ್ಲಬ್​ ಆವರಣಕ್ಕೆ ಪ್ರವೇಶಿಸಿ ಪತ್ರಕರ್ತರು ಮತ್ತು ಪ್ರತಿಭಟನಾಕಾರರ ಮೇಲೆ ದಾಳಿ ನಡೆಸಿದ್ದಾರೆ.

- Advertisement - 

ವಕೀಲ ಸಮುದಾಯದ ಸದಸ್ಯರು ಎನ್‌ಪಿಸಿ ಹೊರಗೆ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದರು. ಪೊಲೀಸರು ಅವರ ಮೇಲೆ ದಾಳಿ ನಡೆಸಿದ್ದಾರೆ.

 

 

Share This Article
error: Content is protected !!
";