ಉನ್ನತಾಧಿಕಾರಿಗಳು, ಸೇನಾ ಮುಖ್ಯಸ್ಥರ ಸಭೆ ನಡೆಸಿದ ಪ್ರಧಾನಿ ಮೋದಿ

News Desk

ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಭಾರತೀಯ ಸೇನೆಯು ಉಗ್ರರ ವಿರುದ್ಧ ನಡೆಸುತ್ತಿರುವ ಕಾರ್ಯಾಚರಣೆಗೆ ವಿರಾಮ ನೀಡುವಂತೆ ಅಂಗಲಾಚಿದ್ದ ಪಾಕಿಸ್ತಾನ
, ಬಳಿಕ ಗಡಿಯಲ್ಲಿ ಮಾತಿಗೆ ತಪ್ಪಿದೆ.

ಇದರ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೇಂದ್ರ ಸರ್ಕಾರದ ಉನ್ನತಾಧಿಕಾರಿಗಳು ಮತ್ತು ಮೂರು ಸೇನಾ ಮುಖ್ಯಸ್ಥರ ಜೊತೆ ಮಹತ್ವದ ಸಭೆ ನಡೆಸಿ ಪರಿಸ್ಥಿತಿಯ ಅವಲೋಕನ ಮತ್ತು ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಿದರು.

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿದೇಶಾಂಗ ಸಚಿವ ಎಸ್.ಜೈಶಂಕರ್, ಎನ್​ಎಸ್ಎ ಮುಖ್ಯಸ್ಥ ಅಜಿತ್​ ದೋವಲ್​​​​, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ (ಸಿಡಿಎಸ್​) ಜನರಲ್ ಅನಿಲ್ ಚೌಹಾಣ್ ಮತ್ತು ಮೂರೂ ಸೇನಾ ಪಡೆಗಳ ಮುಖ್ಯಸ್ಥರು ಭಾಗವಹಿಸಿದ್ದರು.

ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ:
ಭಾರತದ ಸೇನಾ ಪಡೆಗಳು ಪಹಲ್ಗಾಮ್​ ಉಗ್ರ ದಾಳಿಗೆ ಪ್ರತಿಯಾಗಿ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಆಪರೇಷನ್ ಸಿಂಧೂರ ಹೆಸರಲ್ಲಿ ಕಾರ್ಯಾಚರಣೆ ನಡೆಸಿ ಉಗ್ರ ನೆಲೆಗಳನ್ನು ಧ್ವಂಸ ಮಾಡಿದೆ. ನಾಲ್ಕೇ ದಿನದಲ್ಲಿ ಭಾರತದ ದಾಳಿಗೆ ಪಾಕಿಸ್ತಾನ ತತ್ತರಿಸಿ ಅಮೆರಿಕದ ಮುಂದೆ ಮಂಡಿಯೂರಿ ಕದನ ವಿರಾಮಕ್ಕೆ ಅಂಗಲಾಚಿತ್ತು ಬೇಡಿಕೊಂಡಿತ್ತು.

ಅಮೆರಿಕಾ ಅಧ್ಯಕ್ಷ ಟ್ರಂಪ್ ಅವರು ಭಾರತದೊಂದಿಗೆ ಸತತ ಮಾತುಕತೆ ನಡೆಸಿ ಎರಡೂ ರಾಷ್ಟ್ರಗಳ ನಡುವಿನ ಕದನಕ್ಕೆ ವಿರಾಮ ನೀಡಲು ಒಪ್ಪಿಸಿದ್ದರು. ಅದರಂತೆ ಮೇ 10ರಂದು ಸಂಜೆ 5 ಗಂಟೆಗೆ ಅನ್ವಯಿಸುವಂತೆ ಕದನ ವಿರಾಮ ಘೋಷಿಸಲಾಗಿತ್ತು.

ಆದರೆ, ಕಪಟಿ ಪಾಕಿಸ್ತಾನವು ವಿರಾಮ ಘೋಷಿಸಿದ ಕೆಲವೇ ಗಂಟೆಯಲ್ಲಿ ಗಡಿಯಲ್ಲಿ ರಾತ್ರಿ ಶೆಲ್​, ಕ್ಷಿಪಣಿ ದಾಳಿ ನಡೆಸಿ ಒಪ್ಪಂದ ಉಲ್ಲಂಘಿಸಿದೆ. ಪಾಕಿಸ್ತಾನವು ಕದನ ವಿರಾಮವನ್ನು ಉಲ್ಲಂಘಿಸಿದೆ ಎಂದು ಭಾರತ ಶನಿವಾರ ರಾತ್ರಿ ಆರೋಪಿಸಿತ್ತು. ಇದರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿತ್ತು. ಈ ಬಗ್ಗೆ ಚರ್ಚೆ ಪ್ರಧಾನಿ ಮೋದಿ ಅವರು ಉನ್ನತ ಮಟ್ಟದ ಸಭೆಯಲ್ಲಿ ಚರ್ಚೆ ನಡೆಸಿದ್ದಾರೆ.

ಶನಿವಾರ ರಾತ್ರಿ ಪಾಕಿಸ್ತಾನ ನಡೆಸಿದ ಶೆಲ್ ಮತ್ತು ಡ್ರೋನ್ ದಾಳಿಯ ನಂತರ ಭಾರತ- ಪಾಕಿಸ್ತಾನದ ಗಡಿ ಪ್ರದೇಶಗಳಲ್ಲಿನ ನಿವಾಸಿಗಳು ಆತಂಕದಲ್ಲಿದ್ದಾರೆ. ಆದಾಗ್ಯೂ ಪರಿಸ್ಥಿತಿ ಸಹಜವಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಸಿಎಂ ಅಸಮಾಧಾನ: ಕದನ ವಿರಾಮ ಘೋಷಣೆಯನ್ನು ಸ್ವಾಗತಿಸಿದ್ದ ಜಮ್ಮು-ಕಾಶ್ಮೀರ ಸಿಎಂ ಒಮರ್​ ಅಬ್ದುಲ್ಲಾ ಬಳಿಕ ಪಾಕಿಸ್ತಾನ ನಿಯಮ ಉಲ್ಲಂಘಿಸಿ ನಡೆಸಿದ ದಾಳಿಯನ್ನು ಖಂಡಿಸಿದ್ದರು. ವಿರಾಮದ ಬಳಿಕವೂ ಗಡಿಯಲ್ಲಿ ಸ್ಫೋಟ ಸದ್ದು ಕೇಳಿಬರುತ್ತಿದೆ ಎಂದು ಅವರು ಅಸಮಾಧಾನ ಹೊರ ಹಾಕಿದ್ದರು.

 

Share This Article
error: Content is protected !!
";