ಸಾರ್ವಜನಿಕರು ಕಟ್ಟಡದ ಮೇಲೆ ಹತ್ತದಂತೆ ಸೂಚನೆ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರದ ಬಿ.ಡಿ.ರಸ್ತೆಯಲ್ಲಿ ಸ್ಥಾಪನೆ ಮಾಡಲಾಗಿರುವ ಹಿಂದೂ ಮಹಾಗಣಪತಿಯ ವಿಸರ್ಜನಾ ಮೆರವಣಿಗೆ ಹಾಗೂ ಶೋಭಯಾತ್ರೆಯು ಇದೇ ಸೆ.28ರಂದು ನಡೆಯಲಿದ್ದು, ಈ ಸಮಯದಲ್ಲಿ ಸಾರ್ವಜನಿಕರು ಕಟ್ಟಡದ ಮೇಲೆ ಹತ್ತದಂತೆ ಬೆಸ್ಕಾಂ ಸೂಚನೆ ನೀಡಿದೆ.

- Advertisement - 

 ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆಯು ಚಳ್ಳಕೆರೆ ಗೇಟ್‌ನಿಂದ ಬಿ.ಡಿ.ರಸ್ತೆ, ಗಾಂಧಿ ವೃತ್ತದ ಮೂಲಕ ಹೊಳಲ್ಕೆರೆ ರಸ್ತೆಯ ಮುಖಾಂತರ ಚಂದ್ರವಳ್ಳಿ ತೋಟಕ್ಕೆ ಸಾಗಲಿರುವ ಮಾರ್ಗದಲ್ಲಿ ಹಾಗೂ ಸುತ್ತ-ಮುತ್ತ ಇರುವ ಅಂಗಡಿ ಮಳಿಗೆಗಳ ಮೇಲೆ ಸಾರ್ವಜನಿಕರು ಹತ್ತದಂತೆ ಅಂಗಡಿಗಳ ಮಾಲೀಕರು ನಿಗಾವಹಿಸಬೇಕು.

- Advertisement - 

ಒಂದು ವೇಳೆ ಸಾರ್ವಜನಿಕರು ಅಂಗಡಿಗಳ ಮೇಲೆ ಹತ್ತಿ ಯಾವುದೇ ಅಹಿತಕರ ಘಟನೆಗಳು ಸಂಭವಿಸಿದಲ್ಲಿ ಅದರಿಂದಾಗುವ ಆಗುಹೋಗುಗಳಿಗೆ ಅಂಗಡಿ ಮಾಲೀಕರೇ ನೇರ ಹೊಣೆಗಾರರು ಎಂದು ಬೆಸ್ಕಾಂ ಚಿತ್ರದುರ್ಗ ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

- Advertisement - 

 

Share This Article
error: Content is protected !!
";