ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಶ್ರೀ ಘಾಟಿ ಸುಬ್ರಮಣ್ಯ ಸ್ವಾಮಿ ದೇವಾಲಯದ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಬ್ರಹ್ಮರಥೋತ್ಸವದ ಪೂರ್ಣಹುತಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.
ಈ ಕಾರ್ಯಕ್ರಮದಲ್ಲಿ ದೇವಾಲಯದ ಕಾರ್ಯದರ್ಶಿ ಹಾಗೂ ಉಪ ಆಯುಕ್ತರು ಪಿ. ದಿನೇಶ್, ತಹಶೀಲ್ದಾರ್ ಮಲ್ಲಪ್ಪ, ಪ್ರಧಾನ ಅರ್ಚಕರಾದ ಶ್ರೀನಿಧಿ ದೇವಾಲಯದ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರು,ದೇವಾಲಯದ ಸಿಬ್ಬಂದಿ ಭಾಗವಹಿಸಿದ್ದರು.

