ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚುನಾವಣೆಗಳಲ್ಲಿ ಸೋತಾಗಲೆಲ್ಲಾ ಜನರ ತೀರ್ಪನ್ನು ಅವಮಾನಿಸಿ ಚುನಾವಣಾ ಆಯೋಗದ ಮೇಲೆ, ಇವಿಎಂ ಮೇಲೆ ಆರೋಪ ಮಾಡುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಚುನಾವಣಾ ಆಯೋಗ ಕಟುವಾಗಿ ಪ್ರತಿಕ್ರಿಯಿಸಿದೆ.
ಜನರಿಂದ ವಿರುದ್ಧ ಫಲಿತಾಂಶ ಬಂದಿರುವುದಕ್ಕಾಗಿ ಚುನಾವಣಾ ಆಯೋಗದ ವಿರುದ್ಧ ಭಾರತೀಯ ಕಾಂಗ್ರೆಸ್ ಆರೋಪ ಹೊರಿಸುತ್ತಿದೆ ಎಂದು ಖಾರವಾಗಿ ಆಯೋಗ ಉತ್ತರಿಸಿದೆ.
ಶತಮಾನದ ಇತಿಹಾಸ ಹೊಂದಿರುವ ಕಾಂಗ್ರೆಸ್ ಪಕ್ಷವನ್ನು ಜನರು ಈಗ ಕಡೆಗಣಿಸುತ್ತಿದ್ದಾರೆ. ಜನರ ಹೃದಯದಲ್ಲಿ ಸ್ಥಾನ ಗಳಿಸುವಲ್ಲಿ ವಿಫಲವಾಗಿರುವ ರಾಹುಲ್ ಗಾಂಧಿ ಈಗ ವ್ಯವಸ್ಥೆಯನ್ನು ದೂಷಿಸುವ ಮೂಲಕ ತಮ್ಮ ಅಪ್ರಬುದ್ಧತೆಯನ್ನು ಪ್ರದರ್ಶಿಸುತ್ತಿದ್ದಾರೆ ಎಂದು ಬಿಜೆಪಿ ವಾಗ್ದಾಳಿ ಮಾಡಿದೆ.