ಚಂದ್ರವಳ್ಳಿ ನ್ಯೂಸ್, ಹಾಸನ:
ಹಾಸನಾಂಬೆ ದರ್ಶನಕ್ಕೆಂದು ಬರುವಾಗ ತಮ್ಮ ಕಾರನ್ನು ತಡೆದ ಅಧಿಕಾರಿಗಳ ವಿರುದ್ಧ ಶಾಸಕ ಹೆಚ್.ಡಿ.ರೇವಣ್ಣ ಗರಂ ಆದ ಪ್ರಸಂಗ ಹಾಸನದಲ್ಲಿ ನಡೆದಿದೆ.
ಶಾಸಕ ರೇವಣ್ಣ ಅವರು ತಮ್ಮ ಭದ್ರತಾ ಸಿಬ್ಬಂದಿಯೊಂದಿಗೆ ಹಾಸನಾಂಬೆ ದರ್ಶನಕ್ಕೆ ಶಿಷ್ಟಾಚಾರ ಪಾಲನೆ ಮಾಡದೆ ಆಗಮಿಸಿದ್ದರು. ಅಧಿಕಾರಿಗಳಿಗೆ ತಿಳಿಸದೆ ಹಾಸನಾಂಬೆ ದರ್ಶನಕ್ಕೆ ಆಗಮಿಸಿದ ರೇವಣ್ಣ ಅವರ ಕಾರನ್ನ ಅಧಿಕಾರಿಗಳು ತಡೆದ ಪ್ರಸಂಗ ಜರುಗಿತು.
ಶಿಷ್ಟಾಚಾರ ಪಾಲನೆ ಮಾಡಿದೆ ಆಗಮಿಸಿದ ರೇವಣ್ಣ ಅವರ ಕಾರನ್ನು ಕಂದಾಯ ಇಲಾಖೆ ಅಧಿಕಾರಿಗಳು ತಡೆಯುತ್ತಿದ್ದಂತೆ ಗರಂ ಆದ ಶಾಸಕರು, ಬಳಿಕ ಕಾರಿನಿಂದ ಇಳಿದು ನಡೆದುಕೊಂಡು ದರ್ಶನಕ್ಕೆ ತೆರಳಿದ ಘಟನೆ ಜರುಗಿತು.
ಈ ವೇಳೆ ಅಧಿಕಾರಿಗಳು ಹೆಚ್.ಡಿ.ರೇವಣ್ಣ, ಪತ್ನಿ ಭವಾನಿಗೆ ಸಿಬ್ಬಂದಿ ನೇರ ಎಂಟ್ರಿ ಕೊಟ್ಟಿದ್ದಾರೆ.

