ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ರವಿ ಸಿದ್ದಪ್ಪ ಆಯ್ಕೆ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲೂಕಿನ
ತೂಬಗೆರೆ ಹೋಬಳಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ರವಿ ಸಿದ್ದಪ್ಪ ರವರನ್ನು ನೇಮಕ ಮಾಡಿ  ಅಧಿಕೃತವಾಗಿ ಘೋಷಣೆ ಮಾಡಲಾಯಿತು.

- Advertisement - 

ಬೆಂಗಳೂರು ಗ್ರಾಮಾಂತರ ಕಾಂಗ್ರೇಸ್ ಕಛೇರಿಯಲ್ಲಿ   ಬೆಂಗಳೂರು ಗ್ರಾಮಾಂತರ ಉಸ್ತುವಾರಿ ಸಚಿವರಾದ ಕೆ ಎಚ್ ಮುನಿಯಪ್ಪ ನವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ ಆರ್ ಗೌಡ ರವರು ಆದೇಶದ ನೇಮಕಾತಿ ಪತ್ರ  ನೀಡಿದರು‌.

- Advertisement - 

ಈ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ  ಹಾಗು ದೊಡ್ಡಬಳ್ಳಾಪುರ ಮತ್ತು ದೆವನಹಳ್ಳಿ ತಾಲ್ಲೂಕಿನ ಎಲ್ಲಾ ಕಾಂಗ್ರೇಸ್ ಪಕ್ಷದ ಪದಾಧಿಕಾರಿಗಳು ಮುಖಂಡರು  ನೂತನ ಅಧ್ಯಕ್ಷರಿಗೆ ಅಭಿನಂದಿಸಿದ್ದಾರೆ.

- Advertisement - 
Share This Article
error: Content is protected !!
";