ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಯುವಜನತೆಗೆ ಉದ್ಯೋಗಾವಕಾಶಗಳನ್ನು ಒದಗಿಸುವ ಉದ್ದೇಶದಿಂದ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ “ಬೃಹತ್ ಉದ್ಯೋಗ ಮೇಳ”ವನ್ನು ಸಾರಿಗೆ ಸಚಿವ ಆರ್.ರಾಮಲಿಂಗಾರೆಡ್ಡಿ ಉದ್ಘಾಟಿಸಿದರು.
ಸಂದರ್ಶನದಲ್ಲಿ ಯಶಸ್ವಿಯಾಗಿ ಆಯ್ಕೆಯಾದ ನೂರಾರು ಯುವಕ-ಯುವತಿಯರಿಗೆ ಸ್ಥಳದಲ್ಲೇ ನೇಮಕಾತಿ ಪತ್ರಗಳನ್ನು ವಿತರಿಸಿ, ಅವರ ಹೊಸ ಜೀವನದ ಹಾದಿಗೆ ಶುಭ ಕೋರಿದರು.
ನಮ್ಮ ಯುವಶಕ್ತಿ ಆರ್ಥಿಕವಾಗಿ ಸದೃಢರಾಗಲು ಇಂತಹ ಮೇಳಗಳು ಸಹಕಾರಿಯಾಗಲಿ ಎಂದು ಸಚಿವ ರಾಮಲಿಂಗಾರೆಡ್ಡಿ ಶುಭ ಹಾರೈಸಿದರು.
ಸ್ಥಳೀಯ ಶಾಸಕ ಇಕ್ಬಾಲ್ ಹುಸೇನ್, ವಿಧಾನ ಪರಿಷತ್ ಸದಸ್ಯ ರಾಮೋಜಿಗೌಡ, ಎಂಇಐ ಅಧ್ಯಕ್ಷ ಎಸ್.ಮನೋಹರ್ ಹಾಗೂ ಇತರ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

