ಚಂದ್ರವಳ್ಳಿ ನ್ಯೂಸ್, ಹೂವಿನಹಡಗಲಿ:
ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ನಿರ್ದೇಶನದ ಮೇರೆಗೆ ಕಾಂಗ್ರೆಸ್ ಭವನ ಟ್ರಸ್ಟ್ ನಿರ್ಮಾಣಕ್ಕಾಗಿ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ವಿಧಾನ ಸಭಾ ಕ್ಷೇತ್ರದ ಉಪ ನೋಂದಣಿ ಕಚೇರಿಯಲ್ಲಿ ಕಾಂಗ್ರೆಸ್ ಭವನ ಟ್ರಸ್ಟ್ ನಿವೇಶನದ ನೋಂದಾವಣೆ ಮಾಡಲಾಯಿತು.
ಕಾಂಗ್ರೆಸ್ ಭವನ ಟ್ರಸ್ಟಿ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿಜಯ್ ಮುಳಗುಂದ್, ಕಾಂಗ್ರೆಸ್ ಭವನ ಟ್ರಸ್ಟ್ ಕಾರ್ಯದರ್ಶಿ ಎಲ್. ನಾರಾಯಣ್, ಮಾಜಿ ಸಚಿವ ಪಿ.ಟಿ ಪರಮೇಶ್ವರ ನಾಯ್ಕ, ವಿಜಯನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ಸಿರಾಜ್ ಶೇಖ್, ಕೆಪಿಸಿಸಿ ಸದಸ್ಯ ಶ್ರೀನಿವಾಸ, ಜಿಲ್ಲಾ ಉಪಾಧ್ಯಕ್ಷ ಕೆ.ಎಂ ಹಾಲಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಂಬಗಲ್ ರಾಮಕೃಷ್ಣ , ಹಡಗಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆಟವಾಳಗಿ ಕೋಟ್ರೇಶ, ಇಟಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕ್ವಾಲ್ವಿ ಹನುಮಂತಪ್ಪ, ಮಾಜಿ ಪುರಸಭೆ ಅಧ್ಯಕ್ಷ ಜ್ಯೋತಿ ಮಲ್ಲಣ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.