ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ದಿವಂಗತ ಕಲಾವಿದ ಪಿ.ಆರ್.ತಿಪ್ಪೇಸ್ವಾಮಿ ಅವರ 26ನೇ ಪುಣ್ಯ ಸ್ಮರಣೆ ಅಂಗವಾಗಿ ಹಿರಿಯೂರು ತಾಲ್ಲೂಕಿನ ಹರ್ತಿಕೋಟೆಯಲ್ಲಿರುವ ಪಿ.ಆರ್.ತಿಪ್ಪೇಸ್ವಾಮಿ ಅವರ ಸ್ಮಾರಕದ ಬಳಿ ಪೂಜೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ ಅಧ್ಯಕ್ಷ ಡಾ.ಮಾನಸ, ರಾಜ್ಯ ಮಾಹಿತಿ ಆಯುಕ್ತ ರುದ್ರಣ್ಣ ಹರ್ತಿಕೋಟೆ, ಪಿ.ಆರ್.ತಿಪ್ಪೇಸ್ವಾಮಿ ಪ್ರತಿಷ್ಠಾನ ಟ್ರಸ್ಟ್ ಅಧ್ಯಕ್ಷ ರಾಜಶೇಖರ ಕದಂಬ, ಕಾರ್ಯದರ್ಶಿ ಮಹದೇವಶೆಟ್ಟಿ, ಖಜಾಂಚಿ ಚಂದ್ರಶೇಖರಯ್ಯ, ಸದಸ್ಯರಾದ ಎಚ್.ಆರ್.ಶಂಕರ್, ಸಿ.ಚಿಕ್ಕಣ್ಣ, ಗ್ರಾಮದ ಮುಖಂಡರಾದ ನಾಗಭೂಷಣ ಹಾಗೂ ಇತರರು ಇದ್ದರು.

