ಖಾಸಗಿ ಹೋಟೆಲ್ ಒಂದರಲ್ಲಿ ಆರ್​ಎಫ್​ಒ ಶವವಾಗಿ ಪತ್ತೆ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಮೈಸೂರು:
ಅರಣ್ಯ ಇಲಾಖೆಯ ಆರ್​ಎಫ್​ಒ ಅವರು ಖಾಸಗಿ ಹೋಟೆಲ್ ಒಂದರಲ್ಲಿ ಶವವಾಗಿ ಪತ್ತೆ ಆಗಿರುವಂತಹ ಘಟನೆ ಮೈಸೂರು ಕೇಂದ್ರ ಬಸ್​ ನಿಲ್ದಾಣದ ಬಳಿಯಿರುವ ಖಾಸಗಿ ಹೋಟೆಲ್​​ನಲ್ಲಿ ನಡೆದಿದೆ.

ಟಿ ನರಸೀಪುರದಲ್ಲಿ ಆರ್​ಎಫ್​ಒ ಕಾಂತರಾಜ್ ಚೌಹಾಣ್​​ ಅವರು ನಗರದ ಖಾಸಗಿ ಹೋಟೆಲ್​​ವೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸದ್ಯ ಅವರ ಸಾವಿನ ಬಗ್ಗೆ ಸಾಕಷ್ಟು ಅನುಮಾನಗಳು ಹುಟ್ಟಿಕೊಂಡಿದ್ದು, ಘಟನಾ ಸ್ಥಳಕ್ಕೆ ಲಷ್ಕರ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

- Advertisement - 

ಏನಿದು ಘಟನೆ?:
ಕಳೆದ 15 ದಿನಗಳಿಂದೆಯಷ್ಟೇ ಆರ್ಎಫ್ಒ ಕಾಂತರಾಜ್ ಚೌಹಾಣ್​​​ ಅವರು ನರಸೀಪುರಕ್ಕೆ ವರ್ಗವಾಗಿದ್ದರು.
ಕೊಪ್ಪಳ ಜಿಲ್ಲೆಯ ಗಂಗಾವತಿ ಮೂಲದ ಸ್ನೇಹಿತ ಮಲ್ಲನಗೌಡ ಪಾಟೀಲ್ ಜೊತೆಗೆ ಭಾನುವಾರ ಮಲ್ಲನಗೌಡ ರೂಮ್​ ಬುಕ್ ಮಾಡಿದ್ದರು. ಆದರೆ ಏಕಾಏಕಿ ಮೃತಪಟ್ಟಿದ್ದಾರೆ.

ಯುವರಾಜ್ ಗೆಲಾಕ್ಸಿ ಹೋಟೆಲ್ ಸಮೀಪದ ಕುಮಾರನ್ ಜ್ಯುವೆಲರ್ಸ್​ ಹಿಂಭಾಗದ ಕಾರಿಡಾರ್​ನಲ್ಲಿ ಕಾಂತರಾಜ್ ಚೌಹಾಣ್​​​ ಶವ‌ಬಿದ್ದಿತ್ತು. ಇನ್ನು ಇತ್ತ ಕಾಂತರಾಜ್ ಸ್ನೇಹಿತ ಮಲ್ಲನಗೌಡ ಪಾಟೀಲ್ ನಾಪತ್ತೆಯಾಗಿದ್ದು ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ.

- Advertisement - 

 

Share This Article
error: Content is protected !!
";