ರೋಹಿತ್ ವೆಮುಲಾ ಕಾಯ್ದೆ:   ಪರಿಶೀಲಿಸಿ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರೋಹಿತ್ ವೆಮುಲಾ ಕಾಯ್ದೆಯ ಕರಡು ಸಿದ್ಧಪಡಿಸುವಂತೆ ಕಾನೂನು ಸಲಹೆಗಾರರಿಗೆ ಸೂಚನೆ ನೀಡಲಾಗಿದೆ ಎಂದು ಪಕ್ಷದ ವರಿಷ್ಠ ರಾಹುಲ್ ಗಾಂಧಿಯವರಿಗೆ ಪತ್ರ ಬರೆಯಲಾಗಿದ್ದು, ಈ ಕುರಿತು ಪರಿಶೀಲಿಸಿ ಕಾಯ್ದೆ ತರಲು ಪ್ರಯತ್ನ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.

ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕ್ರಮ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಸಿ. ಇ.ಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿರುವ ಅಧಿಕಾರಿಗಳ ಮೇಲೆ ಶಿಸ್ತಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

 

Share This Article
error: Content is protected !!
";