ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಬೆಳಕವಾಡಿ ಸಮೀಪದ ಸತ್ತೇಗಾಲ ಕಾವೇರಿ ನದಿ ಅಣೆಕಟ್ಟಿನಿಂದ ರಾಮನಗರ ಜಿಲ್ಲೆಯ ನಾನಾ ಕಡೆಗೆ ಶಾಶ್ವತ ಕುಡಿಯುವ ನೀರು ಪೂರೈಕೆ ಯೋಜನೆಗಳಿಗೆ ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಅವರು ಸ್ಥಳ ಪರಿಶೀಲಿಸಿ ಭೂಮಿ ಪೂಜೆ ನೆರವೇರಿಸಿದರು.
ರಾಮನಗರ ಜಿಲ್ಲೆಯಲ್ಲಿ ನೀರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವ ಸಲುವಾಗಿ, 540 ಕೋಟಿ ರೂ. ವೆಚ್ಚದಲ್ಲಿ, ಕಾವೇರಿ ನದಿ ಸತ್ತೇಗಾಲ ಸಮೀಪದ ಅಣೆಕಟ್ಟಿನಿಂದ ಗುರುತ್ವಾಕರ್ಷಣೆಯ ಮೂಲಕ ಇಗ್ಗಲೂರಿನಲ್ಲಿರುವ ಬ್ಯಾರೇಜ್ಗೆ ನೀರು ಹರಿಸಿ,
ಹಾಲಿ ಇರುವ ಕೆರೆ ತುಂಬಿಸುವ ಯೋಜನೆಗಳಿಗೆ ನೀರಿನ ಲಭ್ಯತೆಯನ್ನು ಹೆಚ್ಚಿಸುವುದು ಹಾಗೂ ಅಲ್ಲಿಂದ ನೀರನ್ನು ಎತ್ತಿ ಮಂಚನಬೆಲೆ ಮತ್ತು ವೈ.ಜಿ. ಗುಡ್ಡ ಜಲಾಶಯಗಳಿಗೆ ಕುಡಿಯುವ ನೀರನ್ನು ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದು ಡಿಸಿಎಂ ಶಿವಕುಮಾರ್ ತಿಳಿಸಿದರು.