ಹಿರಿಯ ಸಾಹಿತಿ ಡಾ. ಬಿ.ಟಿ ಲಲಿತಾನಾಯಕ್ ಗೆ ʻಶ್ರೀ ಸಂತ ಸೇವಾಲಾಲ್ ಪ್ರಶಸ್ತಿʼ ಪ್ರದಾನ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಂಜಾರ ಸಂಸ್ಕøತಿ ಮತ್ತು ಭಾಷಾ ಅಕಾಡೆಮಿ ವತಿಯಿಂದ ಸ್ಥಾಪಿಸಿದ ಪ್ರಥಮ ವರ್ಷದ ʻಶ್ರೀ ಸಂತ ಸೇವಾಲಾಲ್ ಪ್ರಶಸ್ತಿʼ ಯನ್ನು ಬಂಜಾರ ಸಮುದಾಯದ ಹಿರಿಯ ಸಾಹಿತಿ, ಹೋರಾಟಗಾರ್ತಿ ಹಾಗೂ ಮಾಜಿ ಸಚಿವೆ ಡಾ. ಬಿ.ಟಿ ಲಲಿತಾನಾಯಕ್ ಅವರಿಗೆ ನಾಡೋಜ ಪ್ರೊ. ಬರಗೂರು ರಾಮಚಂದ್ರಪ್ಪ ಹಾಗೂ ಬಂಜಾರ ಸಂಸ್ಕøತಿ ಮತ್ತು ಭಾಷಾ ಅಕಾಡೆಮಿ ಅಧ್ಯಕ್ಷರಾದ ಡಾ. ಎ.ಆರ್. ಗೋವಿಂದಸ್ವಾಮಿ ಅವರು ಪ್ರದಾನ ಮಾಡಿದರು.

ಈ ಸಂದರ್ಭದಲ್ಲಿ ಎಂ.ಎಲ್.ಸಿ ಪುಟ್ಟಣ್ಣ, ಕನ್ನಡ ಪುಸ್ತಕ ಪ್ರಾಧಿಕಾರ ಅಧ್ಯಕ್ಷರಾದ ಡಾ. ಮಾನಸ, ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಕೆ.ಎಲ್. ಮುಕುಂದ್ ರಾಜ್, ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಅಧ್ಯಕ್ಷರಾದ ಡಾ. ಚನ್ನಪ್ಪ ಕಟ್ಟೆ, ಬಂಜಾರ ಅಕಾಡೆಮಿ ರಿಜಿಸ್ಟ್ರಾರ್ ಡಿ.ಎಂ. ರವಿಕುಮಾರ್ ಹಾಗೂ ಬಂಜಾರ ಸಮುದಾಯದ ಹಿರಿಯರು, ವಿದ್ವಾಂಸರು ಉಪಸ್ಥಿತರಿದ್ದರು.

 

 

Share This Article
error: Content is protected !!
";