ಶಿಕ್ಷಕ ಮಹಿಳಾ ಪದಾಧಿಕಾರಿಗಳನ್ನು ನಿಂದಿಸಿದ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಕ್ಷಮೆ ಕೋರಬೇಕು

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಶಿವಮೊಗ್ಗದಲ್ಲಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್ ಷಡಕ್ಷರಿ ಅವರು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷೆ ಪದ್ಮಲತಾ ಹಾಗೂ ವಿಜಯನಗರ ಜಿಲ್ಲೆಯ ಕೆಲವು ಮಹಿಳೆಯರಿಗೆ ಗಾಂಚಾಲಿ
, ನೀನು ಎಂಬ ಶಬ್ದ ಬಳಕೆ ಮಾಡಿ ಏಕ ವಚನದಲ್ಲಿ ನಿಂದಿಸಿರುವ ವಿಡಿಯೋ ನೋಡಿ ಆಶ್ಚರ್ಯ ಹಾಗೂ ದಿಗ್ಭ್ರಮೆ ಉಂಟಾಗಿದೆ ಎಂದು ಅಖಿಲ ಕರ್ನಾಟಕ ರಾಜ್ಯ ಸರಕಾರಿ ಮಹಿಳಾ ನೌಕರರ ಸಂಘದ ರಾಜ್ಯಾಧ್ಯಕ್ಷೆ ರೋಶನಿ ಗೌಡ, ಪ್ರಧಾನ ಕಾರ್ಯದರ್ಶಿ ಕೆ. ಶಶಿಕಲಾ ಹೇಳಿದ್ದಾರೆ.

- Advertisement - 

ಮಹಿಳಾ ನೌಕರರಿಗೆ ಕನಿಷ್ಠ ಗೌರವ ನೀಡದೇ ಅವಮಾನಕಾರಕ ಪದ ಬಳಸಿದ್ದು ಖಂಡನೀಯ. ಲಿಂಗ ಸಮಾನತೆ, ಸಾಮರಸ್ಯ ಗಾಳಿಗೆ ತೂರಿ ಪ್ರಜಾಪ್ರಭುತ್ವಕ್ಕೆ ಹಾಗೂ ಮಹಿಳಾ ಸಮುದಾಯಕ್ಕೆ ಮಾಡಿದ ಅವಮಾನ ಇದಾಗಿದೆ.

- Advertisement - 

ಈ ರೀತಿಯ ವರ್ತನೆ ನೌಕರರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಶೋಭೆ ತರುವುದಿಲ್ಲ. ಈ ಬಗ್ಗೆ ಕ್ಷಮೆ ಕೇಳದಿದ್ದರೆ ತೀವ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

- Advertisement - 
Share This Article
error: Content is protected !!
";