ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಶಂಕರ್ ಟಾಕೀಸ್ ಕುಮಾರ್ ಸಹೋದರ ಚಿತ್ರದುರ್ಗ ನಗರದ ಬ್ಯಾಂಕ್ ಕಾಲೋನಿ ನಿವಾಸಿ ಜಿ.ಪಿ ಉಮೇಶ್(63) ಅವರು ಹೃದಯಘಾತದಿಂದ ನಿಧನರಾಗಿದ್ದಾರೆ.
ಕಂದಾಯ ಪಾವತಿಸಲು ನಗರಸಭೆಗೆ ಹೋಗಿದ್ದಾಗ ಕುಸಿದು ಬಿದ್ದ ಜಿ.ಪಿ.ಉಮೇಶ್ರನ್ನು ಸ್ನೇಹಿತರು ಅವರ ಮನೆಗೆ ಕರೆದುಕೊಂಡು ಹೋಗಿ ಅಲ್ಲಿಂದ ಆಸ್ಪತ್ರೆಗೆ ಹೋಗುವಷ್ಟರಲ್ಲಿ ಕೊನೆಯುಸಿರೆಳೆದಿದ್ದಾರೆ.
ಟೈಲ್ಸ್ ಮತ್ತು ಗ್ರಾನೈಟ್ ಗುತ್ತಿಗೆದಾರರಾಗಿದ್ದ ಜಿ.ಪಿ.ಉಮೇಶ್ ಅವರು ಪತ್ನಿ, ಓರ್ವ ಪುತ್ರ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಜೋಗಿಮಟ್ಟಿ ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಗುರುವಾರ ಬೆಳಿಗ್ಗೆ ೧೧ ಗಂಟೆಗೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.