ಶಿವಕುಮಾರ್ ಸಿಎಂ ಆಗುತ್ತಾರೆ ಕಾಂಗ್ರೆಸ್​​ ನಲ್ಲಿ ಹೈಕಮಾಂಡ್ ಸುಪ್ರೀಂ, ಶಾಸಕರಲ್ಲ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುವ ನಿರೀಕ್ಷೆ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಭವಿಷ್ಯ ನುಡಿದರು.

ಅವರು ಮೈಸೂರಿನಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಪ್ರತಿಕ್ರಿಯಿಸಿ ವಿಶ್ವನಾಥ್ ಮಾಧ್ಯಮಗಳೊಂದಿಗೆ ಮಾತನಾಡಿ​, ಹೈಕಮಾಂಡ್​ ಸೂಚನೆ ಆ ರೀತಿ ಇದೆ. ರಾಜ್ಯದಲ್ಲಿ 136 ಸ್ಥಾನ ಬರಲು ಡಿ.ಕೆ.ಶಿವಕುಮಾರ್ ಪಾತ್ರ ಇದೆ.

- Advertisement - 

ಆದ್ದರಿಂದ ಹೈಕಮಾಂಡ್ ಡಿ.ಕೆ.ಶಿವಕುಮಾರ್​ಗೆ ಅವಕಾಶ ಕೊಡುತ್ತಾರೆ ಎಂಬ ನಿರೀಕ್ಷೆ ಇದೆ ಎಂದರಲ್ಲದೆ ಅವರು, ಕಾಂಗ್ರೆಸ್​​ ಪಕ್ಷದಲ್ಲಿ ಹೈಕಮಾಂಡ್ ಸುಪ್ರೀಂ, ಶಾಸಕರಲ್ಲ ಎಂದು ತಿಳಿಸಿದರು.

ವರ್ಗಾವಣೆಗೆ ಪೊಲೀಸರು ಹಣ ಕೊಡಬೇಕು. ಒಂದು ಎಸಿಪಿ ವರ್ಗಾವಣೆಗೆ ಒಂದು ಕೋಟಿ ಕೊಡಬೇಕು, ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಧೂಳೀಪಟವಾಗಿದೆ ಎಂದು ವಿಪ ಸದಸ್ಯ ವಿಶ್ವನಾಥ್ ಆರೋಪಿಸಿದರು.

- Advertisement - 

 

Share This Article
error: Content is protected !!
";