ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಯುದ್ಧದ ಸಮಯದಲ್ಲಿ ಗುತ್ತಿಗೆದಾರರಿಗೆ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಕಿರುಕುಳ ! ಹೆಚ್ಚಿದೆ ಎಂದು ಜೆಡಿಎಸ್ ವಾಗ್ದಾಳಿ ಮಾಡಿದೆ.
ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಗೆ ರಾಜ್ಯದಲ್ಲಿ ಕಾಂಗ್ರೆಸ್ಸರ್ಕಾರದಿಂದ ಕಲೆಕ್ಷನ್ಶುರುವಾಗಿದೆ. ಕರ್ನಾಟಕವನ್ನು ATM ನಂತೆ ಬಳಸಿಕೊಳ್ಳುತ್ತಿರುವ ಕಾಂಗ್ರೆಸ್ಹೈಕಮಾಂಡ್ಬಿಹಾರ ಚುನಾವಣೆಗಾಗಿ ರಾಜ್ಯದಲ್ಲಿ ಫಂಡ್ಕಲೆಕ್ಷನ್ಮಾಡುತ್ತಿದೆ ಎಂದು ಜೆಡಿಎಸ್ ಗಂಭೀರ ಆರೋಪ ಮಾಡಿದೆ.
ಹೈಕಮಾಂಡ್ಮುಂದೆ ವರ್ಚಸ್ಸು ಎಚ್ಚಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ನಾ ಮುಂದು ತಾ ಮುಂದು ಎಂದು ಪೈಪೋಟಿಗೆ ಇಳಿದು ರಾಜ್ಯದಲ್ಲಿ ಗುತ್ತಿಗೆದಾರರಿಗೆ ಕಿರುಕುಳ, ಬೆದರಿಕೆ ಹಾಕಿ 60% ಲೆಕ್ಕದಲ್ಲಿ ವಸೂಲಿಗೆ ಇಳಿದಿದ್ದಾರೆ ಎಂದು ಜೆಡಿಎಸ್ ಆರೋಪಿಸಿದೆ.
ಕಮಿಷನ್ ಕಾಂಗ್ರೆಸ್ ಮಂತ್ರಿಗಳಿಗೆ ಇಲಾಖಾವಾರು ಟಾರ್ಗೆಟ್ಫಿಕ್ಸ್ಮಾಡಿ, ಗುತ್ತಿಗೆದಾರರ ಬಿಲ್ಪಾಸ್ಮಾಡಲು ಪರ್ಸಂಟೇಜ್ವ್ಯವಹಾರದ ಮೂಲಕ ಲೂಟಿಯಲ್ಲಿ ನಿರತವಾಗಿದೆ ಎಂದು ಜೆಡಿಎಸ್ ಕಿಡಿಕಾರಿದೆ.