“ನಾನೇ ಸಿಎಂ” ಎಂದು ಹೇಳಿಕೊಳ್ಳುವ ಪರಿಸ್ಥಿತಿ ಸಿದ್ದರಾಮಯ್ಯಗೆ ಬಂದಿದೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
 ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ಯಾವ ಮುಖ್ಯಮಂತ್ರಿಗೂ ಇಂತಹ ಪರಿಸ್ಥಿತಿ ಬಂದಿರಲಿಲ್ಲ. ಸಿಎಂ ಕುರ್ಚಿಯಲ್ಲಿ ಕುಳಿತುಕೊಂಡು ದಯನೀಯವಾಗಿ, ಅಸಹಾಯಕನಾಗಿ “ನಾನೇ ಸಿಎಂ” ಎಂದು ಹೇಳಿಕೊಳ್ಳುವ ಪರಿಸ್ಥಿತಿ ಸಮಾಜವಾದಿ ಸಿದ್ದರಾಮಯ್ಯ ಅವರಿಗೆ ಬಂದಿರುವುದು ದುರಂತ ಎಂದು ಬಿಜೆಪಿ ಕನಿಕರ ವ್ಯಕ್ತಪಡಿಸಿದೆ.

- Advertisement - 

ಕರ್ನಾಟಕ ಕಾಂಗ್ರೆಸ್ ಸರ್ಕಾರದೊಳಗಿನ ಕುರ್ಚಿ ಕಿತ್ತಾಟದಿಂದ ರಾಜ್ಯ ಬಡವಾಗಿದೆ. ಅಭಿವೃದ್ಧಿಯೂ ಇಲ್ಲ, ಕಾನೂನು ಸುವ್ಯವಸ್ಥೆ ಪಾತಾಳಕ್ಕೆ ಕುಸಿದಿದೆ, ದಿನ ನಿತ್ಯ ಬೆಲೆ ಏರಿಕೆ ಸಾಮಾನ್ಯವಾಗಿದೆ, ಜನಸಾಮಾನ್ಯರ ಬದುಕು ದುಸ್ತರವಾಗಿದೆ.

- Advertisement - 

ಆದರೂ ನಾಡಿನ ದೊರೆಗೆ ಕುರ್ಚಿಯದ್ದೇ ಚಿಂತೆಯಾಗಿದೆ ಎಂದು ಬಿಜೆಪಿ ಆರೋಪಿಸಿದೆ.
ಸಿಎಂ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಿಯೇ ಸಿದ್ಧ ಎಂದು ಡಿಸಿಎಂ ಡಿ.ಕೆ ಶಿವಕುಮಾರ್
  ಪಣ ತೊಟ್ಟಿದ್ದಾರೆ. ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಲು ಬಿಡುವುದಿಲ್ಲವೆಂದು ಸಿದ್ದು ಬಣ ತೊಡೆತಟ್ಟಿ ನಿಂತಿದೆ.

ಈ ಗ್ಯಾರಂಟಿ ಸರ್ಕಾರ ಮುಂದುವರೆಯುವ ಬಗ್ಗೆ ಸ್ವತಃ ಕರ್ನಾಟಕ ಕಾಂಗ್ರೆಸ್ ನಾಯಕರಿಗೆ, ಕಾರ್ಯಕರ್ತರಿಗೂ ಗ್ಯಾರಂಟಿಯಿಲ್ಲ ಎಂದು ಬಿಜೆಪಿ ವ್ಯಂಗ್ಯವಾಡಿದೆ.

- Advertisement - 

 

Share This Article
error: Content is protected !!
";