ಚಂದ್ರವಳ್ಳಿ ನ್ಯೂಸ್, ಮಂಗಳೂರು:
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರೊಂದಿಗೆ ರಾಜಕೀಯ ಚರ್ಚೆಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಬುಧವಾರ ಅವರು ಮಾತನಾಡಿದರು.
ಕರೆದರೆ ಮಾತ್ರ ದೆಹಲಿಗೆ-
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬುಧವಾರ ದೆಹಲಿಗೆ ಪ್ರಯಾಣ ಬೆಳೆಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರು ಹೋಗುವುದಕ್ಕೆ ಯಾರೂ ಬೇಡ ಅಂದಿಲ್ಲ. ನೀವು ದೆಹಲಿಗೆ ಹೋಗುತ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ನಾನು ಹೋಗುವುದಿಲ್ಲ. ನನ್ನನು ಕರೆದರೆ ಮಾತ್ರ ದೆಹಲಿಗೆ ತೆರಳುವೆ ಎಂದರು.

