ಸಿದ್ದರಾಮಯ್ಯನವರು ನಮ್ಮ ನಾಯಕರು, ಎಲ್ಲ ಚುನಾವಣೆಗೂ ಅವರು ಬೇಕು

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಮಗೆ(ಕಾಂಗ್ರೆಸ್) ಸಿದ್ದರಾಮಯ್ಯ ಬೇಕು. ಅವರೇ ಇರಬೇಕು. ಹೊಸ ನಾಯಕ ತಯಾರಾಗುವ ತನಕ ಅವರ ಅವಶ್ಯಕತೆ ಮುಖ್ಯ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಾರ್ಮಿಕವಾಗಿ ನುಡಿದರು.

- Advertisement - 

ಬೆಂಗಳೂರಿನಲ್ಲಿ ಮಾತನಾಡಿದ ಶಿವಕುಮಾರ್, ಸಿದ್ದರಾಮಯ್ಯನವರು ನಮ್ಮ ನಾಯಕರು. ಅವರು ಮುಂದಿನ ಎಲ್ಲ ಚುನಾವಣೆಗೂ ಬೇಕು. ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಬಿಬಿಎಂಪಿ, ಅಸೆಂಬ್ಲಿ, ಪಾರ್ಲಿಮೆಂಟ್ ಚುನಾವಣೆಗೂ ಬೇಕು. ಅವರು ಕಾಂಗ್ರೆಸ್ ನಾಯಕ.

- Advertisement - 

ಅವರನ್ನು ಕಾಂಗ್ರೆಸ್ ಪಕ್ಷ 2 ಬಾರಿ ಮುಖ್ಯಮಂತ್ರಿಯನ್ನಾಗಿ ಮಾಡಿದೆ. ದಿನಾ ಬೆಳಗ್ಗೆದ್ದು ಅವರ ಹೆಸರು ಹೇಳಿಕೊಂಡು ಅವರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವುದು ಬೇಡ. ಅದರ ಅವಶ್ಯಕತೆನೂ ಇಲ್ಲ. ಅವರು ನಮ್ಮ ಪ್ರಶ್ನಾತೀತ ನಾಯಕ ಎಂದು ಡಿಕೆ ಶಿವಕುಮಾರ್ ಹೇಳಿದರು.

ಡಿಸಿಎಂ ಡಿಕೆ ಶಿವಕುಮಾರ್​ ಬೆಂಗಳೂರಿನಲ್ಲಿ ಸಿಟಿ ರೌಂಡ್ಸ್​ ಮಾಡಿದ ಸಂದರ್ಭದಲ್ಲಿ ರಸ್ತೆ ಕಾಮಗಾರಿ ಪರಿಶೀಲನೆ ವೇಳೆ ಅಭಿಮಾನಿಗಳು ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎಂದು ಘೋಷಣೆ ಕೂಗಿದ್ದು ವಿಶೇಷವಾಗಿತ್ತು. ಆದರೆ ಅಭಿಮಾನಿಗಳ ಜೈಕಾರಕ್ಕೆ ಡಿಕೆ ಶಿವಕುಮಾರ್ ಕಿಡಿಗೊಡಲಿಲ್ಲ.

- Advertisement - 

 

 

 

Share This Article
error: Content is protected !!
";