ಭಾರತವನ್ನು ರೂಪಿಸುವಲ್ಲಿ ತ್ಯಾಗ, ಬಲಿದಾನವಿದೆ-ಸಿದ್ದರಾಮಯ್ಯ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಭಾರತವನ್ನು ರೂಪಿಸುವಲ್ಲಿ ನಮ್ಮವರ ತ್ಯಾಗ, ಬಲಿದಾನವಿದೆ, ಸಂಘರ್ಷದ ಬದುಕಿದೆ ಎಂಬುದನ್ನು ಈ ದಿನ ಪ್ರತಿಯೊಬ್ಬರೂ ಸ್ಮರಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಪ್ರಜಾಪ್ರಭುತ್ವ ಕೇವಲ ಒಂದು ಸರ್ಕಾರವಲ್ಲ, ಅದು ಮಾನವೀಯ ಮೌಲ್ಯಗಳನ್ನು ಒಳಗೊಂಡ ಜೀವನ ಕ್ರಮ. ಜಾತಿ ಆಧಾರಿತ ತಾರತಮ್ಯವಿರುವ ನಮ್ಮ ದೇಶದಲ್ಲಿ ಪ್ರಜಾಪ್ರಭುತ್ವ ಉಳಿದರಷ್ಟೇ ಬಹುಸಂಖ್ಯಾತರಿಗೆ ಬದುಕು.

- Advertisement - 

ಪ್ರಜಾಪ್ರಭುತ್ವದಿಂದ ದೊರೆತ ಸ್ವಾತಂತ್ರ್ಯವನ್ನು, ಕಲಿತ ಮೌಲ್ಯಗಳನ್ನು, ಪಡೆದ ಅಧಿಕಾರವನ್ನು ಪ್ರಜಾಪ್ರಭುತ್ವದ ರಕ್ಷಣೆಗಾಗಿ ಬಳಸೋಣ. ಸಂವಿಧಾನವನ್ನು ದುರ್ಬಲಗೊಳಿಸುವ ಪ್ರಜಾಪ್ರಭುತ್ವ ವಿರೋಧಿಗಳ ಕುತಂತ್ರವನ್ನು ಹಿಮ್ಮೆಟ್ಟಿಸೋಣ. ನಾಡಿನ ಸಮಸ್ತ ಜನರಿಗೆ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಶುಭಾಶಯಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

 

- Advertisement - 

Share This Article
error: Content is protected !!
";