ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ರೈಲ್ವೆ ಟಿಕೆಟ್ ದರ ಹೆಚ್ಚಳ ಮಾಡಿರುವುದು ಈಗಾಗಲೇ ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆಗಳ ಏರಿಕೆಯಿಂದ ಕಂಗಾಲಾಗಿರುವ ಜನಸಾಮಾನ್ಯರ ಮೇಲೆ ಮತ್ತೆ ಗದಾಪ್ರಹಾರ ಮಾಡಿದಂತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ನಾವು ರೈತರಿಗೆ ನೆರವಾಗುವ ದೃಷ್ಟಿಯಿಂದ ಹಾಲಿನ ಬೆಲೆಯೇರಿಕೆ ಮಾಡಿದಾಗ ನಮ್ಮ ವಿರುದ್ಧ ಬೀದಿಗಿಳಿದ ರಾಜ್ಯದ ಕರ್ನಾಟಕದ ಬಿಜೆಪಿ ನಾಯಕರು
ಈಗ ಕೇಂದ್ರ ತನ್ನ ಖಜಾನೆ ಭರ್ತಿಗೆ ರೈಲ್ವೆ ಟಿಕೆಟ್ ದರ ಹೆಚ್ಚಳ ಮಾಡಿದರೂ ಬಾಯಿಮುಚ್ಚಿ ಕೂತಿರುವುದು ಖಂಡನೀಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.