ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ತಮ್ಮ ಕಚೇರಿಯಲ್ಲಿ ಪುರುಷರ ಕಿರಿಯ ಹಾಕಿ ಪಂದ್ಯಾವಳಿಯ ವಿಶ್ವ ಕಪ್ ಟ್ರೋಪಿಯನ್ನು ಅನಾವರಣಗೊಳಿಸಿ, ಶುಭ ಹಾರೈಸಿದರು.
ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರಾದ ಕೆ.ಗೋವಿಂದರಾಜು, ಪದ್ಮಶ್ರೀ ಪುರಸ್ಕೃತ ಧನಂಜಯ್ ಪಿಳ್ಳೈ, ಅರ್ಜುನ ಪ್ರಶಸ್ತಿ ಪುರಸ್ಕೃತರಾದ ಡಾ.ಎ.ಬಿ.ಸುಬ್ಬಯ್ಯ,
ಕರ್ನಾಟಕ ಹಾಕಿ ಅಸೋಸಿಯೇಷನ್ ಕಾರ್ಯದರ್ಶಿಗಳಾದ ವಿ.ಆರ್.ರಘುನಾಥ್, ಶಾಸಕರಾದ ತರೀಕೆರೆ ಶ್ರೀನಿವಾಸ್, ಹಂಪನಗೌಡ ಸೇರಿದಂತೆ ಅನೇಕ ಗಣ್ಯರು ಈ ಸಂಭ್ರಮಕ್ಕೆ ಸಾಕ್ಷಿಯಾದರು.

