ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅವೈಜ್ಞಾನಿಕ ಗ್ಯಾರಂಟಿಗಾಗಿ ದಲಿತರ ಶ್ರೇಯೋಭಿವೃದ್ಧಿಯ ಹಣವೇ ಬೇಕೇ ಸಿದ್ದರಾಮಯ್ಯ? ಎಂದು ಜೆಡಿಎಸ್ ತೀಕ್ಷ್ಣವಾಗಿ ಪ್ರಶ್ನಿಸಿದೆ.
ದಲಿತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುವುದು, ಬಳಿಕ ನಂಬಿಸಿ ಅವರ ಕತ್ತು ಹಿಸುಕುವುದು ಕರ್ನಾಟಕ ಕಾಂಗ್ರೆಸ್ ಪಕ್ಷದ ಅಜೆಂಡಾ.
ಅಧಿಕಾರಕ್ಕೆ ಬಂದಾಗಿನಿಂದ ಕಾಂಗ್ರೆಸ್ಸರ್ಕಾರ ಕಳೆದ 2023-24ರಿಂದ 2025 -26 ಅವಧಿಯಲ್ಲಿ ಪರಿಶಿಷ್ಟರಿಗೆ ಮೀಸಲಾದ SCP- TSP ಅನುದಾನದಲ್ಲಿ ಗ್ಯಾರಂಟಿ ಯೋಜನೆಗಳಿಗೆ 24,832 ಕೋಟಿ ದುರ್ಬಳಕೆ ಮಾಡಿಕೊಂಡಿದೆ ಎಂದು ಜೆಡಿಎಸ್ ಆರೋಪಿಸಿದೆ.
ಇದನ್ನು ಸ್ವತಃ ಸಮಾಜ ಕಲ್ಯಾಣ ಸಚಿವ ಹೆಚ್.ಸಿ ಮಹಾದೇವಪ್ಪ ಅವರೇ ಸದನದಲ್ಲಿ ಒಪ್ಪಿಕೊಂಡಿದ್ದು, ಇದು ಕಾಂಗ್ರೆಸ್ಸರ್ಕಾರ ದಲಿತರಿಗೆ ಬಗೆದ ಮಹಾದ್ರೋಹ.
ವಾಲ್ಮೀಕಿ ನಿಗಮ, ಭೋವಿ ನಿಗಮ, ಅಂಬೇಡ್ಕರ್ನಿಗಮಗಳಲ್ಲಿ ದಲಿತರ ಹಣ ಲೂಟಿ ಹೊಡೆದಿದ್ದೇ ದಲಿತ ವಿರೋಧಿ ಸಿದ್ದರಾಮಯ್ಯ ಸರ್ಕಾರದ 2.5 ವರ್ಷಗಳ ಮಹಾನ್ಸಾಧನೆ ಎಂದು ಜೆಡಿಎಸ್ ಟೀಕಾಪ್ರಹಾರ ಮಾಡಿದೆ.

