ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ಕರ್ನಾಟಕ ಕಾಂಗ್ರೆಸ್ ಸರ್ಕಾರವು ತನ್ನ 20 ತಿಂಗಳ ಆಡಳಿತದಲ್ಲಿ ಸಾಧಿ”ಸಿದ್ದು” ಬರೀ ಅಕ್ರಮ-ಅನ್ಯಾಯ-ಭ್ರಷ್ಟಾಚಾರ ಎಂದು ವಿಪಕ್ಷ ನಾಯಕ ಆರ್.ಅಶೋಕ್ ದೂರಿದ್ದಾರೆ.
ಅನ್ನಭಾಗ್ಯ ಯೋಜನೆಯಲ್ಲಿ ನುಡಿದಂತೆ 10 ಕೆಜಿ ಅಕ್ಕಿ ನೀಡದೆ, ಕೇಂದ್ರ ಸರ್ಕಾರ ನೀಡುವ 05 ಕೆಜಿ ಅಕ್ಕಿ ತನ್ನದು ಎಂದು ಹೇಳಿಕೊಳ್ಳುತ್ತಾ, ಆ 05 ಕೆಜಿ ಅಕ್ಕಿಯನ್ನು ಸಹ ಸರಿಯಾಗಿ ವಿತರಿಸದೆ ಕಳ್ಳಾಟವಾಡುತ್ತಿದೆ ಕರ್ನಾಟಕ ಕಾಂಗ್ರೆಸ್ ಸರ್ಕಾರ ಎಂದು ಅಶೋಕ್ ವಾಗ್ದಾಳಿ ಮಾಡಿದ್ದಾರೆ.
ಅನ್ನಭಾಗ್ಯ ಯೋಜನೆಯಲ್ಲಿ ಸಾಲು-ಸಾಲು ಅಕ್ರಮ, ಅವ್ಯವಸ್ಥೆ, ಭ್ರಷ್ಟಾಚಾರದ ಆರೋಪಗಳು ಕೇಳಿ ಬಂದರೂ ಸಿಎಂ ಸಿದ್ದರಾಮಯ್ಯ ಅವರು ಮಾತ್ರ ಏನೂ ನಡೆದೇ ಇಲ್ಲ ಎಂಬಂತೆ ಸುಮ್ಮನಿದ್ದಾರೆ ಎಂದು ಅಶೋಕ್ ಕಿಡಿಕಾರಿದ್ದಾರೆ.