ಸಾರಿಗೆ ಬಸ್ ಬ್ರೇಕ್ ಫೇಲ್ ಆಟೋಕ್ಕೆ ಡಿಕ್ಕಿ, ಆರು ಮಂದಿ ಸಾವು

News Desk

ಚಂದ್ರವಳ್ಳಿ ನ್ಯೂಸ್, ಮಂಗಳೂರು:
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಒಂದರ​ ಬ್ರೇಕ್ ಫೇಲಾಗಿ ಅಪಘಾತಕ್ಕೀಡಾಗಿದ್ದು ಸ್ಥಳದಲ್ಲೇ ಆರು ಜನರು ಸಾವನ್ನಪ್ಪಿರುವ ಘಟನೆ ಕರ್ನಾಟಕ ಹಾಗೂ ಕೇರಳ ಗಡಿ ಭಾಗದ ತಲಪಾಡಿಯಲ್ಲಿ ನಡೆದಿದೆ.

ಕೆಎಸ್‌ಆರ್‌ಟಿಸಿ ಬಸ್ ಬ್ರೇಕ್ ಫೇಲ್ ಆಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಬಸ್​ ತಂಗುದಾಣಕ್ಕೆ ನುಗ್ಗಿ ಬಸ್​ಗಾಗಿ ಕಾಯುತ್ತಿದ್ದವರಿಗೆ ಡಿಕ್ಕಿ ಹೊಡೆದಿದೆ.

- Advertisement - 

ಈ ದುರ್ಘಟನೆಯಲ್ಲಿ ಆಟೋ ಚಾಲಕ, ಒಂದು ಮಗು, ಬಾಲಕಿ, ಮೂವರು ಮಹಿಳೆಯರು ಸಾವನ್ನಪ್ಪಿ ದುರ್ವೈದಿವಗಳು.
ಆಟೋ ಚಾಲಕ ಹೈದರ್ (47)​​
, ಅವಮ್ಮಾ (72), ಖದೀಜಾ (60), ಹಸ್ನಾ(11), ನಫೀಸಾ (52), ಆಯಿಷಾ ಫಿದಾ (19) ಮೃತರಾಗಿದ್ದಾರೆಂದು ಗುರುತಿಸಲಾಗಿದೆ.

ಲಕ್ಷ್ಮಿ (61), ಸುರೇಂದ್ರ (39) ಗಾಯಗೊಂಡಿದ್ದಾರೆ. ಕೇರಳದ ಕಾಸರಗೋಡು ಕಡೆಯಿಂದ ಮಂಗಳೂರು ಕಡೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್​,​ ಆಟೋ ರಿಕ್ಷಾದ ಹಿಂಬದಿ‌ಗೆ ಡಿಕ್ಕಿ ಹೊಡೆದು ದುರುಂತ ಸಂಭವಿಸಿದೆ. ಮೃತರ ಪೈಕಿ 3 ಮಹಿಳೆಯರು ಮತ್ತು ಓರ್ವ ಪುರುಷ ಒಂದೇ ಕುಟುಂಬದವರು ಎನ್ನಲಾಗಿದೆ.

- Advertisement - 

 

 

Share This Article
error: Content is protected !!
";